HEALTH TIPS

ಮೊಬೈಲ್ ಕೊಡಿಸಲಿಲ್ಲವೆಂದು ಮಗ ಸೂಸೈಡ್, ಕೊಡಿಸೋಕೆ ಆಗಲಿಲ್ಲವೆಂದು ತಂದೆಯೂ ಸೂಸೈಡ್!

 ನಾಂದೇಡ್: 'ತಂದೆ ತನಗೆ ಸ್ಮಾರ್ಟ್‍ಫೆÇೀನ್ ಕೊಡಿಸಲಿಲ್ಲ' ಎಂದು ಮನನೊಂದು 16 ವರ್ಷದ ಬಾಲಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನೊಂದು ವಿಚಿತ್ರವೆಂದರೆ ಮಗನ ಶವ ನೋಡಿ ಆತನ ತಂದೆ 'ಮಗನಿಗೆ ಸ್ಮಾರ್ಟ್‍ಫೆÇೀನ್ ಕೊಡಿಸಲು ಆಗಲಿಲ್ಲ' ಎಂದು ತಾನೂ ಸಹ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ನಾಂದೇಡ್ ಜಿಲ್ಲೆಯ ಬಿಳೋಳಿ ತಾಲ್ಲೂಕಿನ ಮಿನಾಕಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

ಮೃತರನ್ನು 16 ವರ್ಷದ ಬಾಲಕ ಓಂಕಾರ್ ಹಾಗೂ ಆತನ ತಂದೆ ರಾಜು (46) ಎಂದು ಗುರುತಿಸಲಾಗಿದೆ.

ರಾಜು ಅವರಿಗೆ ಮೂವರು ಮಕ್ಕಳು. ಕೊನೆಯ ಮಗ ಓಂಕಾರ್ ಹಾಸ್ಟೆಲ್ ಒಂದರಲ್ಲಿ ಇದ್ದುಕೊಂಡು 10 ನೇ ತರಗತಿ ಓದುತ್ತಿದ್ದ. ಮಕರ ಸಂಕ್ರಮಣದ ರಜೆಗೆ ಮನೆಗೆ ಬಂದಿದ್ದ.

'ಇದೇ ವೇಳೆ ಬಾಲಕ ಓಂಕಾರ್ ತನ್ನ ತಂದೆಗೆ ಸ್ಮಾರ್ಟ್‍ಫೆÇೀನ್ ಕೊಡಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಬಡ ರೈತ ಕುಟುಂಬದ ರಾಜು ಮಗನಿಗೆ ಸ್ಮಾರ್ಟ್‍ಫೆÇೀನ್ ಕೊಡಿಸಲು ಆಗಿರಲಿಲ್ಲ. ಇದರಿಂದ ಡೆತ್ ನೋಟ್ ಬರೆದಿಟ್ಟು ಹೊಲದಲ್ಲಿನ ಮರಕ್ಕೆ ಬಾಲಕ ನೇಣು ಹಾಕಿಕೊಂಡಿದ್ದ. ಅದೇ ರಾತ್ರಿ ಮಗನನ್ನು ಹುಡುಕಿಕೊಂಡು ಹೋಗಿದ್ದ ತಂದೆಯೂ ಮಗ ನೇಣು ಹಾಕಿಕೊಂಡಿದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ' ಎಂದು ನಾಂದೇಡ್ ಎಸ್‍ಪಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.

ಮೃತ ಬಾಲಕ ತಾಯಿ ನೀಡಿದ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದ. ಮೃತದೇಹಗಳನ್ನು ಬಿಳೋಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ಈ ಕುರಿತು ನ್ಯೂಸ್ 18 ವೆಬ್‍ಸೈಟ್ ವರದಿ ಮಾಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries