ಮಂಜೇಶ್ವರ: ಕೇರಳ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಂಜೇಶ್ವರ ಘಟಕದ ಸಮಾವೇಶ ಹೊಸಂಗಡಿ ವ್ಯಾಪಾರಿ ಭವನದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಘಟಕದ ಅಧ್ಯಕ್ಷ ಗಣೇಶ್ ಪಾವೂರು ವಹಿಸಿದ್ದರು. ಕೆ.ಎಸ್.ಟಿ.ಎ. ಜಿಲ್ಲಾ ಅಧ್ಯಕ್ಷ ಸುರೇಶ್ ಭಟ್ ಬದಿಯಡ್ಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯದರ್ಶಿ ಸತೀಶ್ ಆಚಾರ್ಯ ಉಪ್ಪಳ, ತಾಲ್ಲೂಕು ಕೋಶಾಧಿಕಾರಿ ಜಯ ದೇವದಾಸ್ ತೂಮಿನಾಡು, ಜೊತೆ ಕಾರ್ಯದರ್ಶಿ ಪ್ರೇಮಲತಾ ಉದ್ಯಾವರ ವರದಿ ವಾಚಿಸಿದರು. ಯೂನಿಟ್ ಕೋಶಾಧಿಕಾರಿ ಪುರುಷೋತ್ತಮ ಆಚಾರ್ಯ ಲೆಕ್ಕ ಪತ್ರ ಮಂಡಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಯೂನಿಟ್ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ ಕುತ್ತನಾಡಿ ದಂಪತಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಮಿತಿ ಸದಸ್ಯರಾದ ಕೃಷ್ಣ ಕೇದುಂಬಾಡಿ, ಗೀತಾ ಮಂಜೇಶ್ವರ, ಕಲಾವತಿ ಹೊಸಂಗಡಿ, ಸುಚಿತಾ ತೂಮಿನಾಡು, ಸ್ವಪ್ನ ಉದ್ಯಾವರ, ರೂಪಾ ಮೀಯಪದವು ಹಾಗು ಹೊಲಿಗೆ ಕಾರ್ಮಿಕರು ಭಾಗವಹಿಸಿದ್ದರು. ಕಾರ್ಯದರ್ಶಿ ಕುಮುದ ರಾಜ್ ಸ್ವಾಗತಿಸಿದರು. ಶರ್ಮಿಳಾ ವಿನಯ ಕುಮಾರ್ ವಂದಿಸಿದರು.





