ಬದಿಯಡ್ಕ: ಗಡಿನಾಡು ಕಾಸರಗೋಡಿನ ದಶಮಾನೋತ್ತರ ಸಂಸ್ಥೆ ರಂಗಸಿರಿ ಸಾಂಸ್ಕøತಿಕ ವೇದಿಕೆಯ ನೇತೃತ್ವದಲ್ಲಿ "ದೀಪದ ಬೆಳಕಿನಲ್ಲಿ ಯಕ್ಷಗಾನ" ಪ್ರದರ್ಶನ ಯಕ್ಷಗಾನದ ಪಿತಾಮಹ ಪಾರ್ತಿಸುಬ್ಬನ ಜನ್ಮಭೂಮಿ ಕುಂಬಳೆಯ ಶ್ರೀ ಗೋಪಾಲಕೃಷ್ಣ ಸನ್ನಿಧಿಯಲ್ಲಿ ವಿಶೇಷವಾಗಿ ದೀಪದ ಬೆಳಕಿನಲ್ಲಿ ಯಕ್ಷಗಾನ ಪ್ರದರ್ಶನ ಇತ್ತೀಚೆಗೆ ನಡೆಯಿತು. ವಿದ್ಯಾರ್ಥಿಗಳಿಂದ ಕಾಲನೇಮಿ ಕಾಳಗ ಹಾಗೂ ಜಾಂಬವತಿ ಕಲ್ಯಾಣ ಎಂಬ ಪೌರಾಣಿಕ ಕಥಾನಕಗಳ ಪ್ರದರ್ಶನಗಳು ನಡೆದವು.
ಯಕ್ಷಗಾನ ಗುರುಗಳಾದ ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ಇವರ ಪರಿಕಲ್ಪನೆಯಂತೆ ಕಾರ್ಯಕ್ರಮವು ಮೂಡಿಬಂತು. ವೇದಿಕೆಗೆ ಗೂಟ ದೀಪದ ಬೆಳಕನ್ನು ಸಜ್ಜುಗೊಳಿಸಲಾಗಿತ್ತು. ವೇದಿಕೆಯ ಹೊರಭಾಗದ ಬೆಳಕು ಬಾರದಂತೆಯೂ ಎಚ್ಚರವಹಿಸಿ ವೇದಿಕೆ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿ ಕಲಾವಿದರು ಚೌಕಿಯಲ್ಲಿ ಬಣ್ಣಗಾರಿಕೆ ನಡೆಸಿದ್ದು ಕೂಡಾ ದೀಪದ ಬೆಳಕಿನಲ್ಲಿ ಎಂಬುದು ಈ ಕಾರ್ಯಕ್ರಮದ ಇನ್ನೊಂದು ವಿಶೇಷ.. ಎಲ್ಲಾ ಉದಯೋನ್ಮುಖ ಕಲಾವಿದರೂ ಸ್ವಂತ ಬಣ್ಣಗಾರಿಕೆ ಮಾಡಿಕೊಳ್ಳಲು ಸಮರ್ಥರಾಗಿದ್ದರು. ಇದರಿಂದಾಗಿ ವಿದ್ಯಾರ್ಥಿ ಕಲಾವಿದರಿಗೆ ವಿಶೇಷ ಅನುಭೂತಿ ದೊರೆಯಿತು. ಅಲ್ಲದೆ ಈ ಪ್ರಯೋಗವು ಯಕ್ಷರಂಗದಲ್ಲಿ ದಾಖಲಾರ್ಹವಾಯಿತು.
ಅಗತ್ಯ ತಯಾರಿಗಳನ್ನು ಕೆಲವೇ ದಿನಗಳಲ್ಲಿ ನಡೆಸಿ ಈ ಪ್ರಯೋಗವನ್ನು ನಡೆಸಲಾಯಿತು. ಸನ್ಮನಸ್ಸುಗಳು ರಂಗವನ್ನು ಸಜ್ಜುಗೊಳಿಸುವಲ್ಲಿಂದ ತೊಡಗಿ ಕಾರ್ಯಕ್ರಮದುದ್ದಕ್ಕೂ ಇದ್ದು ವೀಕ್ಷಿಸಿ ಸೂಕ್ತ ಸೂಚನೆಗಳನ್ನು ನೀಡಿದರು. ಪ್ರಬುದ್ಧ ಪ್ರೇಕ್ಷಕರು ಕಾರ್ಯಕ್ರಮದ ಘನತೆ ಹೆಚ್ಚಿಸಿದರು. ಪಾತ್ರವರ್ಗದಲ್ಲಿ ಡಾ. ಶ್ರೀಶಕುಮಾರ ಪಂಜಿತ್ತಡ್ಕ, ಡಾ. ವಿದ್ಯಾ ಆನಂದ್ ಕೆಕ್ಕಾರು, ಶ್ರೀ. ಶಶಿಧರ ಕುದಿಂಗಿಲ, ಕು. ಅಭಿಜ್ಞಾ ಭಟ್ ಬೊಳುಂಬು, ಚಿ. ಮನ್ವಿತ್ ಕೃಷ್ಣ ನಾರಾಯಣಮಂಗಲ, ಕು. ದೃಶ್ಯಾ ಕುಂಟಾರು, ಚಿ. ಪ್ರಜ್ವಲ್ ಅಂಬುಕುಂಜೆ, ಕು. ಮೋಕ್ಷಾ ಶೆಟ್ಟಿ, ಚಿ. ಸುಮನ್, ಕು. ಬಾನ್ವಿ ಉತ್ತಮ ಸಾಮಥ್ರ್ಯ ಮೆರೆದರು. ಹಿಮ್ಮೇಳದಲ್ಲಿ ಭಾಗವತರಾಗಿ ವಾಸುದೇವ ಕಲ್ಲೂರಾಯ ಮಧೂರು, ಚೆಂಡೆ ಮದ್ದಳೆಗಳಲ್ಲಿ ವೇಣುಗೋಪಾಲ ಭಟ್ ಬರೆಕರೆ, ಸೂರ್ಯನಾರಾಯಣ ಪದಕಣ್ಣಾಯ ಹಾಗೂ ನೇಪಥ್ಯದಲ್ಲಿ ಕೇಶವ ಕಿನ್ಯ, ರಾಜೇಂದ್ರ ವಾಂತಿಚ್ಚಾಲು ಸಹಕರಿಸಿದರು.

.jpg)
.jpg)
.jpg)
