HEALTH TIPS

Mahakumbh 2025 | ಸಂಗಮದಲ್ಲಿ ಮಿಂದೆದ್ದ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಸಚಿವರು

ಮಹಾಕುಂಭ ನಗರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂಪುಟ ಸಚಿವರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. 

ಇಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಇಂದು (ಬುಧವಾರ) ಮಧ್ಯಾಹ್ನ ಯೋಗಿ ಆದಿತ್ಯನಾಥ್ ಮತ್ತು ಸಚಿವರು ಸಂಗಮದಲ್ಲಿ ಸ್ನಾನ ಮಾಡಿದರು.

ಬಿಗಿ ಭದ್ರತೆಯ ನಡುವೆ ಸಿಎಂ ಆದಿತ್ಯನಾಥ್ ಹಾಗೂ ಅವರನ್ನು ಸುತ್ತುವರಿದ ಮಂತ್ರಿಗಳು ಕೆಲ ಕಾಲ ಸಂಗಮದಲ್ಲಿ ಸಂಭ್ರಮದ ಕ್ಷಣಗಳನ್ನು ಕಳೆದರು.

ಆದಿತ್ಯನಾಥ್ ಜತೆಗೆ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಅಲ್ಪಸಂಖ್ಯಾತರ ಕಲ್ಯಾಣ, ಮುಸ್ಲಿಂ ವಕ್ಫ್ ಮತ್ತು ಹಜ್ ಖಾತೆ ರಾಜ್ಯ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ, ಮಿತ್ರಪಕ್ಷ ಅಪ್ನಾ ದಳದ (ಎಸ್) ಸಚಿವ ಆಶಿಶ್ ಪಟೇಲ್ ಮತ್ತು ಬಲ್ದೇವ್ ಸಿಂಗ್ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಗಂಗಾ, ಯಮುನಾ ಮತ್ತು ಸರಸ್ವತಿಯ ನದಿಗಳ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries