ಮಂಜೇಶ್ವರ: ಇತಿಹಾಸ ಪ್ರಸಿದ್ದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವವು ಇಂದಿನಿಂದ(ಫೆಬ್ರವರಿ 11) ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.
ಬೆಳಿಗ್ಗೆ 7ರಿಂದ ಉಷಃಪೂಜೆ, ಗಣಹೋಮ, ನವಕ ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, 09.30ರಿಂದ ಭಜನೆ ಅನಂತಪದ್ಮನಾಭ ಸ್ವಾಮಿ ಮಹಿಳಾ ಭಜನಾ ಮಂಡಳಿ ಅನಂತಪುರ ಇವರಿಂದ. 11.30ರಿಂದ ಸಂಗೀತ ಸೌರಭ ಸಪ್ತಸ್ವರ ಕಲಾಕೇದ್ರ ಕೋಣಾಜೆ ಇವರಿಂದ ಜರಗಲಿದೆ. ಮಧ್ಯಾಹ್ನ 12 ರಿಂದ ಮಹಾಪೂಜೆ, ಶ್ರೀದೇವರಬಲಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ. ಸಂಜೆ 5.30ರಿಂದ ‘ನಾದ ಸುರಭಿ’ ಗಾಯನ ಕು. ಅನುಶ್ರೀ ಮಳಿ ಅವರಿಂದ ನಡೆಯಲಿದೆ. ವಯೋಲಿನ್ ನಲ್ಲಿ ಕು. ತನ್ಮಯಿ ಉಪ್ಪಂಗಳ, ಮೃದಂಗದಲ್ಲಿ ವೆಂಕಟ ಯಶಸ್ವಿ ಕಬೆಕ್ಕೋಡು ಸಹಕರಿಸುವರು. ರಾತ್ರಿ 7ಕ್ಕೆ ರಂಗಪೂಜೆ, 8ರಿಂದ ಭೂತಬಲಿ ಉತ್ಸವ, ದರ್ಶನಬಲಿ ಉತ್ಸವ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಜರಗಲಿದೆ ಎಂದು ಕ್ಷೇತ್ರ ಪ್ರಕಟಣೆ ತಿಳಿಸಿದೆ.

.jpg)

