ಕಾಸರಗೋಡು: ಕಾಸರಗೋಡು ಜಿಲ್ಲಾ ಪಂಚಾಯತಿಯ ನೂತನ ಕಟ್ಟಡವನ್ನು ಫೆ.23ರಂದು ಭಾನುವಾರ ಬೆಳಗ್ಗೆ 11ಗಂಟೆಗೆ ಮುಖ್ಯಮಂತ್ರಿ ಉದ್ಘಾಟಿಸುವರು. ಉದ್ಘಾಟನೆಯ ಅಂಗವಾಗಿ ಸಮಗ್ರ ಸಂಘಟನಾ ಸಮಿತಿಯನ್ನು ರಚಿಸಲಾಯಿತು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಶಾನವಾಸ್ ಪಾದೂರು ಸ್ವಾಗತಿಸಿ, ಹಿತರಕ್ಷಣಾ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಮನು ವಂದಿಸಿದರು.
ಜಿಲ್ಲಾ ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತು ಕಾರ್ಯದರ್ಶಿ ಶ್ಯಾಮಲಕ್ಷ್ಮಿ ಸಂಚಾಲಕರಾಗಿ ಸಂಘಟನಾ ಸಮಿತಿ ರಚಿಸಲಾಯಿತು. ಕಾರ್ಯಕ್ರಮದ ಯಶಸ್ವಿ ಸಂಘಟನೆಗೆ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ. ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ರಾಜಕೀಯ ಪಕ್ಷದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸೇವಾ ಸಂಸ್ಥೆ ಪ್ರತಿನಿಧಿಗಳು ಮುಂತಾದವರು ಒಳಗೊಂಡ ಸಂಘಟನಾ ಸಮಿತಿಯನ್ನು ರಚಿಸಲಾಗಿದೆ. ಉದ್ಘಾಟನಾ ಸಮಾರಂಭದ ಭಾಗವಾಗಿ ಜಿಲ್ಲಾ ಪಂಚಾಯತಿ ಕಟ್ಟಡದ ಮುಂಭಾಗದಲ್ಲಿ ಖ್ಯಾತ ಶಿಲ್ಪಿ ಕನಾಯಿ ಕುಂಞÂ್ಞರಾಮನ್ ವಿನ್ಯಾಸಗೊಳಿಸಿದ ತಾಯಿ ಮತ್ತು ಮಗುವಿನ ಶಿಲ್ಪದ ಅನಾವರಣ, ಜಿಲ್ಲಾ ಜೈವ ವೈವಿಧ್ಯ ಪ್ರಶಸ್ತಿಗಳ ಪ್ರಕಟಣೆ ಮತ್ತು ವಿತರಣೆಯು ಜಿಲ್ಲಾ ಮಟ್ಟದಲ್ಲಿ ಪ್ರವಾಸೋದ್ಯಮ ಸಕ್ರ್ಯೂಟ್ ಪ್ರಸ್ತುತಿ, ವಿಕಲಚೇತನರಿಗೆ ಉಪಕರಣಗಳ ವಿತರಣೆ, ಶಾಲೆಗಳಿಗೆ ಪೀಠೋಪಕರಣಗಳ ವಿತರಣೆ ಹಾಗೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.






