HEALTH TIPS

ಗೋವಿಂದ ಪೈ ಕಾಲೇಜು ಬಾಷಾಂತರಕಾರರ ನಾಲ್ಕನೇ ಸಮಾವೇಶ ಸಮಾಪ್ತಿ

ಮಂಜೇಶ್ವರ:ಗೋವಿಂದ ಪೈ ಕಾಲೇಜಿನಲ್ಲಿ ಭಾಷಾಂತರ ಅಧ್ಯಯನ ವಿಭಾಗ ಹಂಪಿ ವಿಶ್ವವಿದ್ಯಾನಿಲಯ ಹಾಗೂ ಗೋವಿಂದ ಪೈ ಕಾಲೇಜಿನ ಕನ್ನಡ ವಿಭಾಗ ಇದರ ಜಂಟಿ ಆಶ್ರಯದಲ್ಲಿ ಗೋವಿಂದ ಪೈ ಕಾಲೇಜಿನಲ್ಲಿ ಭಾಷಾಂತರಕಾರರ ನಾಲ್ಕನೇ ಸಮಾವೇಶ ಸೋಮವಾರದಿಂದ ಆರಂಭಗೊಂಡು ದಿನಗಳ ಸಮಾವೇಶ ಬುಧವಾರ ಸಮಾಪ್ತಿಗೊಂಡಿತು.

ಫೆ 17 ರಂದು ನಡೆದ ಕಾರ್ಯಕ್ರಮದಲ್ಲಿ ನಾಲ್ಕು ಪುಸ್ತಕಗಳ ಬಿಡುಗಡೆಗೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಕುಲಪತಿ ಡಾ: ಡಿ.ವಿ. ಪರಮಶಿವ ಮೂರ್ತಿ ನೆರವೇರಿಸಿದ್ದರು. ಕಾಲೇಜು ಪ್ರಾಚಾರ್ಯ ಡಾ ಮುಹಮ್ಮದಾಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ.ಸುಭಾಷ್ ಪಟ್ಟಾಜೆ, ವಿಶ್ವನಾಥ ನಾಗಠಾಣ, ಡಾ.ಮೋಹನ ಕುಂಟಾರು, ಎಸ್ ಡಿ ಎಂ ಕಾಲೇಜು ಉಜಿರೆ ಸಹ ಪ್ರಾಧ್ಯಾಪಕ ಡಾ ರಾಜಶೇಖರ ಹಳೆಮನೆ, ಡಾ ಅರುಣ್ ಕುಮಾರ್ ಎಸ್ ಆರ್ ಉಡುಪಿ, ವಿಕಾಸ್ ಹೊಸಮನಿ, ತಾರನಾಥ ವರ್ಕಾಡಿ ಮೊದಲಾದವರು ಉಪಸ್ಥಿತರಿದ್ದರು.


ಫೆ 18 ರಂದು ಬೆಳಗ್ಗೆ ಆರಂಭಗೊಂಡ ಭಾಷಾಂತರಕಾರರ ನಾಲ್ಕನೇ ಸಮಾವೇಶದ ಉದ್ಘಾಟನೆಯನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಉಪಕುಲಪತಿÀ ಡಾ: ಡಿ.ವಿ. ಪರಮಶಿವ ಮೂರ್ತಿ ನಿರ್ವಹಿಸಿದರು  ಕಾಲೇಜು ಪ್ರಾಚಾರ್ಯ ಡಾ ಮುಹಮ್ಮದಾಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕಿ ಡಾ. ಯು ಮಹೇಶ್ವರಿ, ಕಣ್ಣೂರು ವಿವಿ ಸಿಂಡಿಕೇಟ್ ಸದಸ್ಯ ಸಜಿತ್ ಕುಮಾರ್, ಉಪ ಪ್ರಾಂಶುಪಾಲ ಸಚೀಂದ್ರನ್, ಡಾ ಎಂ ಮಲ್ಲಿಕಾರ್ಜುನ ಗೌಡ, ಕಾಲೇಜು ಯುನಿಯನ್ ಚೆಯರ್ಮೇನ್ ದಾವೂದು, ಡಾ.ಮೋಹನ ಕುಂಟಾರು, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥÀ  ಶಿವಶಂಕರ್ ಉಪಸ್ಥಿತರಿದ್ದರು. ಸಮಾರೋಪ ಕಾರ್ಯಕ್ರಮ ಬುಧವಾರ ನಡೆಯಿತು. ಹಂಪಿ ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಡಾ ಮೋಹನ ಕುಂಟಾರು ಅಧ್ಯಕ್ಷತೆ ವಹಿಸಿದ್ದರು. ಡಾ.ವಸಂತ ಕುಮಾರ್ ತಾಳ್ತಜೆ, ಡಾ ಪ್ರಮೀಳ ಮಾಧವ, ಚಿನ್ನಾ ಕಾಸರಗೋಡು, ಕಸಾಪ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಕಾಲೇಜಿನ ಉಪನ್ಯಾಸಕರಾದ ಡಾ ಸುಜೀಶ್ ಎಸ್, ಜಯಂತಿ ಕೆ, ಕಾಲೇಜಿನ ಸುಪರಿಂಟೆಂಡೆಂಟ್  ದಿನೇಶ್ ಕೆ ಎಸ್ ಉಪಸ್ಥಿತರಿದ್ದರು. ಹಂಪಿ ವಿಶ್ವವಿದ್ಯಾನಿಲಯ 60 ವಿದ್ಯಾರ್ಥಿಗಳು ಭಾಗವಹಿಸಿದ್ದು, ಗೋವಿಂದ ಪೈ ಕಾಲೇಜಿನ ಕನ್ನಡ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries