HEALTH TIPS

"ಮನೆಗೊಂದು ಗ್ರಂಥಾಲಯ': ಇಂದು ಯೋಜನೆಯ ಪ್ರಚಾರ, ಕರಪತ್ರ ಬಿಡುಗಡೆ

ಕಾಸರಗೋಡು: ಕನ್ನಡ ಪುಸ್ತಕ ಪ್ರಾಧಿಕಾರದ ಬಹುನಿರೀಕ್ಷಿತ "ಮನೆಗೊಂದು ಗ್ರಂಥಾಲಯ " ಲಕ್ಷ ಗ್ರಂಥಾಲಯಗಳ ಯೋಜನೆಯ ಪ್ರಚಾರ ಹಾಗೂ ಕರಪತ್ರ ಬಿಡುಗಡೆ ಕಾರ್ಯಕ್ರಮ ನಗರದ ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಫೆಬ್ರವರಿ 2ರಂದು ಮಧ್ಯಾಹ್ನ 1ಗಂಟೆಗೆ ನಡೆಯಲಿದೆ.

ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಅವರು ಕನ್ನಡ ಭವನ ಮತ್ತು ಕಾಸರಗೋಡಿನ ವಿವಿಧ ಸಂಸ್ಥೆಗಳನ್ನು ಸಂಪರ್ಕಿಸುವ ಉದ್ದೇಶದೊಂದಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  

ಲಕ್ಷ ಗ್ರಂಥಾಲಯ ಯೋಜನೆಯನ್ನು ಡಾ. ಮಾನಸ ಉದ್ಘಾಟಿಸಿ, ಮನೆಗೊಂದು ಗ್ರಂಥಾಲಯದ ಬಗ್ಗೆ ಮಾಹಿತಿ ನೀಡುವರು.  ಈ ಸಂದರ್ಭ  ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗೆ ಪುಸ್ತಕ ನೀಡಿ ಗಡಿನಾಡು ಕಾಸರಗೋಡಿನಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಚಾಲನೆ ನೀಡುವರು.  ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷತೆ ವಹಿಸುವರು.  ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ ಮುಖ್ಯ ಅಥಿತಿಯಾಗಿ ಭಾಗವಹಿಸುವರು. ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ, ರವಿ ನಾಯ್ಕಪು, ಪ್ರದೀಪ್ ಬೇಕಲ್, ಅರಿಬೈಲ್ ಗೋಪಾಲ್ ಶೆಟ್ಟಿ,  ರಾಜೇಶ್ ಚಂದ್ರ ಕೆ. ಪಿ.ಜಯಾನಂದ ಕುಮಾರ್ ಹೊಸದುರ್ಗ, ಪ್ರಕಾಶ್ ಚಂದ್ರ ಕಾಸರಗೋಡು ಪಾಲ್ಗೊಳ್ಳುವರು.  

.


  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries