HEALTH TIPS

ದೆಹಲಿಯಲ್ಲಿ ಮೋದಿ ನೀತಿಯ ಸಮರ್ಥನೆಯಲ್ಲ, ಎಎಪಿಯ ತಿರಸ್ಕಾರ: ಕಾಂಗ್ರೆಸ್

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ನಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಅವರ ನೀತಿಯ ಸಮರ್ಥನೆಯಲ್ಲ. ಬದಲು ಅರವಿಂದ ಕೇಜ್ರಿವಾಲ್ ಮತ್ತು ಎಎಪಿ ವಿರುದ್ಧ ಮತದಾರರು ತೀರ್ಪು ನೀಡಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. 

ಈ ಕುರಿತು ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸತತ ಮೂರನೇ ಬಾರಿಯೂ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ. ಆದರೆ 2030ರಲ್ಲಿ ಅಧಿಕಾರಕ್ಕೆ ಬಂದು ಮತ್ತೆ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'2015 ಹಾಗೂ 2020ರಲ್ಲಿ ಪ್ರಧಾನಿ ಜನಪ್ರಿಯತೆಯ ಉತ್ತುಂಗದಲ್ಲಿ ಇದ್ದಾಗಲೂ ಎಎಪಿ ದೆಹಲಿಯಲ್ಲಿ ನಿರ್ಣಾಯಕ ಜಯಭೇರಿ ಮೊಳಗಿಸಿತ್ತು. ಹಾಗಾಗಿ ಈ ಬಾರಿಯ ಫಲಿತಾಂಶದಲ್ಲಿ ಮೋದಿ ಅವರ ನೀತಿಗಳನ್ನು ಸಮರ್ಥಿಸುವ ಬದಲು ಈ ಜನಾದೇಶವು ಅರವಿಂದ ಕೇಜ್ರಿವಾಲ್ ಅವರ ಮೋಸ, ವಂಚನೆಯ, ಉತ್ಪ್ರೇಕ್ಷಿತ ಸಾಧನೆಗಳ ತಿರಸ್ಕಾರವಾಗಿದೆ' ಎಂದು ಅವರು ಹೇಳಿದ್ದಾರೆ.

'ಕಾಂಗ್ರೆಸ್ ಉತ್ತಮ ಸಾಧನೆ ಮಾಡುವ ನಿರೀಕ್ಷೆಯಲ್ಲಿತ್ತು. ಆದರೂ ಮತಗಳಿಕೆಯನ್ನು ಹೆಚ್ಚಿಸಿಕೊಂಡಿದೆ. ಕಾಂಗ್ರೆಸ್ ಬಿರುಸಿನ ಪ್ರಚಾರ ನಡೆಸಿತ್ತು. ವಿಧಾನಸಭೆಯಲ್ಲಿ ಶಾಸಕರ ಬಲ ಇಲ್ಲದಿರಬಹುದು. ಆದರೆ ದೆಹಲಿಯಲ್ಲಿ ಪಕ್ಷದ ಉಪಸ್ಥಿತಿಯಿದೆ. ಲಕ್ಷಗಟ್ಟಲೆ ಕಾರ್ಯಕರ್ತರ ನಿರಂತರ ಪ್ರಯತ್ನದಿಂದ 2030ರಲ್ಲಿ ಮತ್ತೆ ಸರ್ಕಾರ ರಚಿಸಲಿದೆ' ಎಂದು ಅವರು ಹೇಳಿದ್ದಾರೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries