HEALTH TIPS

ಜಮ್ಮು | ಗುಂಡಿನ ದಾಳಿ: ಉಗ್ರರಿಗಾಗಿ ಮುಂದುವರಿದ ಶೋಧ

ಜಮ್ಮು: ಸೇನಾ ವಾಹನದ ಮೇಲೆ ಬುಧವಾರ ಗುಂಡಿನ ದಾಳಿ ನಡೆಸಿದ್ದ ಉಗ್ರರಿಗಾಗಿ ರಾಜೌರಿ ಜಿಲ್ಲೆಯ ಸುಂದರ್‌ಬನಿ ವಲಯದಲ್ಲಿ, ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ ತೀವ್ರ ಶೋಧ ಮುಂದುವರಿಸಿದ್ದಾರೆ.

ಎಲ್‌ಒಸಿಗೆ ಹೊಂದಿಕೊಂಡಿರುವ ವಿವಿಧ ಪ್ರದೇಶಗಳನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದಾರೆ.

ಕಠುವಾ ಜಿಲ್ಲೆಯ ಹಿರಾನಗರ ವಲಯದ ವಿವಿಧೆಡೆಯೂ ಶೋಧ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಬುಧವಾರ ಸುಂದರ್‌ಬನಿ ವಲಯದ ಫಲ್‌ ಗ್ರಾಮದ ಅರಣ್ಯ ಪ್ರದೇಶದಲ್ಲಿ ಸೇನೆಯ ವಾಹನ ಗುರಿಯಾಗಿಸಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಆಧುನಿಕ ತಂತ್ರಜ್ಞಾನ, ಡ್ರೋನ್‌ ಮತ್ತು ಶ್ವಾನದಳದ ಸೇವೆ ಬಳಸಿ ಶೋಧ ನಡೆದಿದೆ. ಯಾವುದೆ ಸುಳಿವು ಸಿಕ್ಕಿಲ್ಲ' ಎಂದು ತಿಳಿಸಿದ್ದಾರೆ.

'ಎಕ್ಸ್‌'ನಲ್ಲಿ ಈ ಕುರಿತಂತೆ ಅಭಿಪ್ರಾಯವನ್ನು ಹಂಚಿಕೊಂಡಿರುವ ಸೇನೆಯ 'ವೈಟ್ ನೈಟ್‌ ಕಾರ್ಪ್ಸ್‌' ಪಡೆಯು, 'ಗುಂಡಿನ ದಾಳಿಯಲ್ಲಿ ಸೇನಾ ಸಿಬ್ಬಂದಿಗೂ ಪೆಟ್ಟಾಗಿದೆ ಎಂದು ಕೆಲ ಜಾಲತಾಣಗಳಲ್ಲಿ ವದಂತಿ ಹಬ್ಬಿದೆ. ಇದು, ಆಧಾರರಹಿತ' ಎಂದು ಸ್ಪಷ್ಟಪಡಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries