HEALTH TIPS

ಛತ್ತೀಸಗಢ | ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭದ್ರತಾ ಸಿಬ್ಬಂದಿಗೆ ಗಾಯ

 ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಮಂಗಳವಾರ) ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕ ಸಾಧಕ (ಐಇಡಿ) ಸ್ಫೋಟಗೊಂಡು ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮತ್ತೊಬ್ಬ ಸಿಬ್ಬಂದಿ 'ಸ್ಪೈಕ್ ಟ್ರಾಪ್'ನಲ್ಲಿ (ಮೊನಚಾದ ಲೋಹದ ತುಂಡು) ಸಿಲುಕಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌)ಯ ಜಂಟಿ ತಂಡಗಳು ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿತ್ತು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕ ಸಾಧಕ (ಐಇಡಿ) ಸ್ಫೋಟಗೊಂಡು ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮತ್ತೊಬ್ಬ ಸಿಬ್ಬಂದಿ ನಕ್ಸಲರು ಸೃಷ್ಟಿಸಿದ್ದ 'ಸ್ಪೈಕ್ ಟ್ರಾಪ್'ನಲ್ಲಿ ಸಿಲುಕಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗಾಯಗೊಂಡ ಸಿಬ್ಬಂದಿಗೆ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ವಿಮಾನದ ಮೂಲಕ ಕರೆದೊಯ್ಯಲಾಯಿತು ಎಂದು ಅವರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries