HEALTH TIPS

ಗಿರ್ ಅಭಯಾರಣ್ಯದಲ್ಲಿ ಮೋದಿ ಸಫಾರಿ; ಬುಡಕಟ್ಟು ಜನಾಂಗದವರನ್ನು ಶ್ಲಾಘಿಸಿದ ಪ್ರಧಾನಿ

ಸಸಾನ್: ವಿಶ್ವ ವನ್ಯಜೀವಿ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗ್ಗೆ ತಮ್ಮ ತವರು ರಾಜ್ಯ ಗುಜರಾತ್‌ನ ಜುನಾಗಢ ಜಿಲ್ಲೆಯ ಗಿರ್ ಅಭಯಾರಣ್ಯದಲ್ಲಿ ಸಿಂಹ ಸಫಾರಿ ನಡೆಸಿದರು.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ, ಸಾಮೂಹಿಕ ಪ್ರಯತ್ನಗಳಿಂದಾಗಿ ಏಷ್ಯಾಟಿಕ್ ಸಿಂಹಗಳ ಸಂಖ್ಯೆಯು ಸ್ಥಿರವಾಗಿ ಏರಿಕೆ ಕಂಡಿದೆ ಎಂದು ಹೇಳಿದ್ದಾರೆ ಮತ್ತು ಏಷ್ಯಾಟಿಕ್ ಸಿಂಹಗಳ ಆವಾಸಸ್ಥಾನವನ್ನು ಸಂರಕ್ಷಿಸುವಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರು ಮತ್ತು ಮಹಿಳೆಯರ ಕೊಡುಗೆಯನ್ನು ಶ್ಲಾಘಿಸಿದರು.

"ಇಂದು ಬೆಳಗ್ಗೆ, ವಿಶ್ವ ವನ್ಯಜೀವಿ ದಿನದಂದು, ನಾನು ಗಿರ್‌ನಲ್ಲಿ ಸಫಾರಿಗೆ ಹೋಗಿದ್ದೆ. ಅದು ನಮಗೆಲ್ಲರಿಗೂ ತಿಳಿದಿರುವಂತೆ, ಭವ್ಯವಾದ ಏಷ್ಯಾಟಿಕ್ ಸಿಂಹದ ನೆಲೆಯಾಗಿದೆ. ಗಿರ್‌ಗೆ ಆಗಮಿಸಿರುವುದು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ನಾವು ಸಾಮೂಹಿಕವಾಗಿ ಮಾಡಿದ ಕೆಲಸಗಳ ಹಲವು ನೆನಪುಗಳನ್ನು ಮರಳಿ ತರುತ್ತದೆ" ಎಂದು ಪೋಸ್ಟ್ ಮಾಡಿದ್ದಾರೆ.

"ಕಳೆದ ಹಲವು ವರ್ಷಗಳಲ್ಲಿ, ಸಾಮೂಹಿಕ ಪ್ರಯತ್ನಗಳು ಏಷ್ಯಾಟಿಕ್ ಸಿಂಹಗಳ ಸಂಖ್ಯೆಯು ಸ್ಥಿರವಾಗಿ ಏರುತ್ತಿದೆ ಎಂದು ಖಚಿತಪಡಿಸಿದೆ. ಏಷ್ಯಾಟಿಕ್ ಸಿಂಹಗಳ ಆವಾಸಸ್ಥಾನವನ್ನು ಸಂರಕ್ಷಿಸುವಲ್ಲಿ ಬುಡಕಟ್ಟು ಸಮುದಾಯಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮಹಿಳೆಯರ ಪಾತ್ರ ಅಷ್ಟೇ ಶ್ಲಾಘನೀಯವಾಗಿದೆ" ಎಂದು ಮೋದಿ ಹೇಳಿದ್ದಾರೆ.

ನಮ್ಮ ಗ್ರಹದ ಜೀವವೈವಿಧ್ಯತೆಯನ್ನು ರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಪ್ರತಿಯೊಂದು ಪ್ರಭೇದವೂ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದಿದ್ದಾರೆ.

ಸಫಾರಿಯ ಸಮಯದಲ್ಲಿ ತಾವು ನೋಡಿದ ಸಿಂಹಗಳ ಚಿತ್ರಗಳನ್ನು ಪ್ರಧಾನಿಯವರು ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್, ಇತರ ಸಚಿವರು ಮತ್ತು ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಸಫಾರಿಯ ಸಮಯದಲ್ಲಿ ಮೋದಿ ಅವರೊಂದಿಗೆ ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries