HEALTH TIPS

ತೆಲಂಗಾಣ ಸುರಂಗ ಕುಸಿತ: ಮುಂದುವರಿದ ಶೋಧ

ನಾಗರ್‌ಕರ್ನೂಲ್ : ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಶ್ರೀಶೈಲಂ ಎಡದಂಡೆ ಕಾಲುವೆ ಕುಸಿದು, ಅವಶೇಷಗಳ ಅಡಿ ಸಿಲುಕಿರುವ ಏಳು ಮಂದಿಯ ಪತ್ತೆಗೆ ಶೋಧ ಕಾರ್ಯ ನಿರಂತರವಾಗಿ ಸಾಗಿದೆ. 

ರಕ್ಷಣಾ ತಂಡಗಳ ಇನ್ನಷ್ಟು ಸದಸ್ಯರು ಅಗತ್ಯ ಸಲಕರಣೆಗಳೊಂದಿಗೆ ಭಾನುವಾರ ಸುರಂಗದೊಳಗೆ ತೆರಳಿರುವುದರಿಂದ ಶೋಧ ಕಾರ್ಯ ವೇಗ ಪಡೆದುಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹೈಡ್ರಾಲಿಕ್‌ ಚಾಲಿತ ರೋಬಾಟ್‌ಅನ್ನು ಕಾರ್ಯಾಚರಣೆಗೆ ಬಳಸಿರುವುದರಿಂದ ಮಣ್ಣು ಹಾಗೂ ಇತರ ಅವಶೇಷಗಳ ತೆರವುಗೊಳಿಸುವ ಪ್ರಕ್ರಿಯೆಗೆ ಇನ್ನಷ್ಟು ವೇಗ ಲಭಿಸಿದೆ.

ಫೆ. 22ರಂದು ಸುರಂಗ ಭಾಗಶಃ ಕುಸಿದ ಪರಿಣಾಮ ಎಂಟು ಮಂದಿ ಒಳಗೆ ಸಿಲುಕಿದ್ದರು. ಅದರಲ್ಲಿ ಗುರುಪ್ರೀತ್‌ ಸಿಂಗ್‌ ಎಂಬವರ ಮೃತದೇಹ ಮಾರ್ಚ್‌ 9ರಂದು ಪತ್ತೆಯಾಗಿತ್ತು. ‌ಸೇನೆ, ಎನ್‌ಡಿಆರ್‌ಎಫ್‌, ಎಚ್‌ಆರ್‌ಡಿಡಿ ಮತ್ತು ಸಿಂಗರೇನಿ ಕಾಲಿಯೆರೀಸ್ ಸಂಸ್ಥೆಯ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries