ಮಂಜೇಶ್ವರ : ಕಳೆದ ವರ್ಷ ಶತಮಾನೋತ್ಸವವನ್ನು ಆಚರಿಸಿ ಇದೀಗ 101 ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಕುಳೂರು ಶಾಲೆಯಲ್ಲಿ ಈ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ವಾರ್ಷಿಕೋತ್ಸವಕ್ಕೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲರವರು ಧ್ವಜಾರೋಹಣಗೈಯುವ ಮೂಲಕ ಚಾಲನೆ ನೀಡಿದರು. ಬಳಿಕ ಶಾಲಾ ಮಕ್ಕಳಿಗೆ ಮನೋರಂಜನಾ ಆಟಗಳನ್ನು ಏರ್ಪಡಿಸಲಾಯಿತು.
ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಮೀಂಜ ಪಂಚಾಯತಿನ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿಯವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷÀ ಮೊಹಮ್ಮದ್ ಹಾಜಿ ಕಂಚಿಲ ಅವರು ವಹಿಸಿದ್ದರು.
ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮೀಂಜ ಪಂಚಾಯತಿನ ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ, ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು ಹಾಗೂ ಮೀಂಜ ಪಿ.ಇ.ಸಿ. ಕಾರ್ಯದರ್ಶಿ ಹಾಗೂ ಮಜಿಬೈಲು ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಬಂಗೇರ ಉಪಸ್ಥಿತರಿದ್ದರು. ಈ ವರ್ಷ ಸೇವೆಯಿಂದ ನಿವೃತ್ತರಾಗುತ್ತಿರುವ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ ಹಾಗೂ ಮಂಜೇಶ್ವರ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ರಾಜಗೋಪಾಲ ಎನ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ಶಾಲಾ ಪರವಾಗಿ ಗೌರವಾರ್ಪಣೆ ನೀಡಲಾಯಿತು. ಜೊತೆಗೆ ಭಾರತದ ಥ್ರೋಬಾಲ್ ತಂಡಕ್ಕೆ ಆಯ್ಕೆಯಾಗಿ ಇಂಡೋ-ನೇಪಾಳ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ವಿಜಯಶಾಲಿಗಳಾದ ಅಂತರಾಷ್ಟ್ರೀಯ ಥ್ರೋಬಾಲ್ ಪಟು, ಕುಳೂರು ಶಾಲಾ ಹಳೆ ವಿದ್ಯಾರ್ಥಿ ಬಸವರಾಜ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಉಷಾ ಆದರ್ಶನಗರ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಬಾಲಕೃಷ್ಣ ಶೆಟ್ಟಿ ಪೆÇಯ್ಯೇಲು, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ನಾರಾಯಣ ನಾೈಕ್ ನಡುಹಿತ್ಲು, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸುಧಾಕರ ಶೆಟ್ಟಿ ಎಲಿಯಾಣ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಅನುಪಮ ಚಿನಾಲ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಶೇಖ್ ಅಬ್ದುಲ್ ಮಜೀದ್ ಚಾರ್ಲ ಅವರು ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ. ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ಮಕ್ಕಳು, ಸ್ಥಳೀಯ ಅಂಗನವಾಡಿ ಪುಟಾಣಿಗಳು ಹಾಗೂ ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಮಕ್ಕಳಿಂದ ಕಿರು ನಾಟಕ ಪ್ರದರ್ಶನ ನಡೆಯಿತು. ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದ ಸಹಕರಿಸಿದರು.




.jpg)

