HEALTH TIPS

ಕೀರಿಕ್ಕಾಡು ಸ್ಮಾರಕ ಅಧ್ಯಯನ ಕೇಂದ್ರದಲ್ಲಿ ವಿಶೇಷ ಕಲಾರಾಧನೆ-ತಾಳಮದ್ದಳೆ

ಮುಳ್ಳೇರಿಯ: ದೇಲಂಪಾಡಿ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಮಂದಿರದ ಕೀರಿಕ್ಕಾಡು ಸ್ಮಾರಕ ಅಧ್ಯಯನ ಕೇಂದ್ರ ಸಭಾಭವನದಲ್ಲಿ ಶನಿವಾರ ವಿಶೇಷ ಕಲಾರಾಧನಾ ಕಾರ್ಯಕ್ರಮಗಳು ನೆರವೇರಿತು.

ನವನೀತ ಭಟ್ ಕೊಡಪಾಲ ಮತ್ತು ಮನೆಯವರ ವತಿಯಿಂದ ಸೇವಾರೂಪವಾಗಿ ನಡೆಸಲ್ಪಟ್ಟ ಈ ಕಾರ್ಯಕ್ರಮದ ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ  ದೇವರಿಗೆ ಪೂಜಾರ್ಚನೆ ಸಲ್ಲಿಸಲಾಯಿತು. ಗೋಪಾಲಯ್ಯ ಕೋಟಿಗದ್ದೆ, ಶಾಂತಾಕುಮಾರಿ ದೇಲಂಪಾಡಿ, ಪೂರ್ಣಿಮ ಬನಾರಿ ಇವರ ಸಂಯೋಜನೆಯಲ್ಲಿ ಭಗವದ್ಗೀತೆ ಪಾರಾಯಣ ಸಂಪನ್ನಗೊಂಡಿತು. 


ಬಳಿಕ ಸಂಘದ ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ಮಾರ್ಗದರ್ಶನದಲ್ಲಿ “ಧರ್ಮ ಜಿಜ್ಞಾಸೆ” ಮತ್ತು “ಸಮರ ಸಂಘರ್ಷ  “ ಯಕ್ಷಗಾನ ತಾಳಮದ್ದಳೆ ನೆರವೇರಿತು. ಹಲಸಿನ ಹಳ್ಳಿ ನರಸಿಂಹ ಶಾಸ್ತ್ರಿ ಅವರ ಪ್ರಸಂಗ ಸಾಹಿತ್ಯವನ್ನೊಳಗೊಂಡ ಈ ಅಧ್ಯಯನ ಶೀಲ ಕಥಾ ಭಾಗದ ಪ್ರಸ್ತುತಿಯಲ್ಲಿ ಭಾಗವತರಾಗಿ ಮೋಹನ ಮೆಣಸಿನಕಾನ ಮತ್ತು  ಉದಯೋನ್ಮುಖ ಪ್ರತಿಭೆ ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಅವರು ಕಾಣಿಸಿಕೊಂಡರು. ಚೆಂಡೆಮದ್ದಳೆಯಲ್ಲಿ  ಶ್ರೀಧರ ಆಚಾರ್ಯ ಈಶ್ವರಮಂಗಲ,ಅಪ್ಪಯ್ಯ ಮಣಿಯಾಣಿ ಮಂಡೆಕ್ಕೋಲು, ವಿಷ್ಣುಶರಣ ಬನಾರಿ, ಬಿ.ಎಚ್. ಕೃಷ್ಣಪ್ರಸಾದ, ಸದಾನಂದ ಮಯ್ಯಾಳ ಮತ್ತು ಚಕ್ರತಾಳದಲ್ಲಿ ಮಾಸ್ಟರ್ ಶ್ರೀದೇವ್ ಈಶ್ವರಮಂಗಲ ಸಹಕರಿಸಿದರು. ಅರ್ಥಧಾರಿಗಳಾಗಿ ಎಂ. ರಮಾನಂದ ರೈ ದೇಲಂಪಾಡಿ, ರಾಮಣ್ಣ ಮಾಸ್ತರ್ ದೇಲಂಪಾಡಿ, ಐತ್ತಪ್ಪ ಗೌಡ ಮುದಿಯಾರು, ರಾಮನಾಯ್ಕ ದೇಲಂಪಾಡಿ, ನಾರಾಯಣ ಪಾಟಾಳಿ ಮಯ್ಯಾಳ, ಪದ್ಮನಾಭರಾವ್ ಮಯ್ಯಾಳ ಸಂವಹನ ರೂಪದಿಂದ ನಿರೂಪಿಸಿ ರಂಜಿಸಿದರು. ನಂದಕಿಶೋರ ಬನಾರಿ ಸ್ವಾಗತಿಸಿ, ವಂದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries