HEALTH TIPS

ತೆಲಂಗಾಣ ಕಾಲುವೆ ಕುಸಿತ ಪ್ರಕರಣ: ಓರ್ವನ ಮೃತದೇಹ ಪತ್ತೆ

ನಾಗರಕರ್ನೂಲ್: ಭಾಗಶಃ ಕುಸಿದಿರುವ ಶ್ರೀಶೈಲಂ ಎಡದಂಡೆ ಕಾಲುವೆಯ(ಎಸ್‌ಎಲ್‌ಬಿಸಿ) ಸುರಂಗದಡಿ ಸಿಲುಕಿರುವ 8 ಮಂದಿ ಕಾರ್ಮಿಕರ ಪತ್ತೆಗಾಗಿ 2 ವಾರಗಳಿಗೂ ಹೆಚ್ಚು ಕಾಲ ಶೋಧ ನಡೆಸುತ್ತಿದ್ದ ರಕ್ಷಣಾ ತಂಡಗಳು ಇಂದು( ಭಾನುವಾರ) ಒಬ್ಬನ ಮೃತದೇಹವನ್ನು ಪತ್ತೆಹಚ್ಚಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಾಗರಕರ್ನೂಲ್ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

48 ಗಂಟೆಗಳಿಗೂ ಹೆಚ್ಚು ಕಾಲ ಬಹಳ ಎಚ್ಚರಿಕೆಯಿಂದ ಅಗೆದು ಶವವನ್ನು ಹೊರತೆಗೆಯಲಾಗಿದೆ. ಸುಮಾರು 10 ಅಡಿ ಆಳದಲ್ಲಿ ಹೂಳಿನ ಅಡಿಯಲ್ಲಿ ಶವ ಹೂತುಹೋಗಿತ್ತು. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಮಿಕರ ಪತ್ತೆಗಾಗಿ ಭಾನುವಾರ ಶ್ವಾನದಳವನ್ನು ಬಳಸಲಾಯಿತು. ಕೇರಳ ಪೊಲೀಸ್‌ ಇಲಾಖೆಯಲ್ಲಿನ ಬೆಲ್ಜಿಯನ್‌ ಮಲಿನೋಸ್‌ ಜಾತಿಯ ನಾಯಿಗಳು ಸುಮಾರು 15 ಅಡಿ ಆಳದಲ್ಲಿನ ವಾಸನೆಯನ್ನು ಗ್ರಹಿಸುವ ಸಾಮರ್ಥ್ಯವನ್ನು ಹೊಂದಿದ್ದು, ಅವುಗಳು ಗುರುತಿಸುವ ಸ್ಥಳಗಳಲ್ಲಿ ಗುಂಡಿ ತೋಡಲಾಗುತ್ತಿದೆ. ಸದ್ಯ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಉಳಿದ ಕಾರ್ಮಿಕರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಫೆಬ್ರುವರಿ 22ರಂದು ಶ್ರೀಶೈಲಂ ಎಡದಂಡೆ ಕಾಲುವೆ ಯೋಜನೆಯ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಸುಮಾರು 8 ಮಂದಿ ಕಾರ್ಮಿಕರು ಸಿಲುಕಿಕೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries