ಮುಂಬೈ: ಛತ್ರಪತಿ ಸಂಭಾಜಿನಗರ ಜಿಲ್ಲೆಯ ಖುಲ್ದಾಬಾದ್ನಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಸಮಾಧಿಯನ್ನು ಧ್ವಂಸಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದೆ.
ಪತ್ರಕರ್ತ ಹಾಗೂ ಹೋರಾಟಗಾರ ಕೇತನ್ ತಿರೋಡ್ಕರ್ ಈ ಅರ್ಜಿ ಸಲ್ಲಿಸಿದ್ದಾರೆ.
'ರಾಷ್ಟ್ರೀಯ ಸ್ಮಾರಕಗಳ ಪಟ್ಟಿಯಿಂದ ಈ ಸಮಾಧಿ ಹೆಸರನ್ನು ಕೈಬಿಡುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಆದೇಶಿಸಬೇಕು' ಎಂದೂ ಅವರು ಪಿಐಎಲ್ನಲ್ಲಿ ಕೋರಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇನ್ನಷ್ಟೆ ಕೈಗೆತ್ತಿಕೊಳ್ಳಬೇಕಿದೆ.




