HEALTH TIPS

ನಗದು ಪತ್ತೆ ಪ್ರಕರಣ: ವಕೀಲರ ವಿರೋಧದ ನಡುವೆಯೂ ನ್ಯಾ. ವರ್ಮಾ ಅಲಹಾಬಾದ್‌ಗೆ ವರ್ಗ

ನವದೆಹಲಿ: ನ್ಯಾಯಮೂರ್ತಿ ಯಶವಂತ ವರ್ಮ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

ಸರ್ಕಾರದ ಅಧಿಸೂಚನೆಯಂತೆ ಕಾನೂನು ಸಚಿವಾಲಯವು ವರ್ಗಾವಣೆಯನ್ನು ಪ್ರಕಟಿಸಿದೆ.

ಮಾರ್ಚ್ 14 ರಂದು ರಾತ್ರಿ 11.35 ರ ಸುಮಾರಿಗೆ ನ್ಯಾಯಮೂರ್ತಿ ವರ್ಮಾ ಅವರ ಲುಟಿಯೆನ್ಸ್ ದೆಹಲಿ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಅಧಿಕಾರಿಗಳಿಗೆ ನಗದು ಇರುವುದು ಪತ್ತೆಯಾಗಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು.

ವಿವಾದದ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ, ನ್ಯಾಯಮೂರ್ತಿ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಿತ್ತು.

ಈ ನಡುವೆ ನ್ಯಾಯಮೂರ್ತಿ ವರ್ಮಾ ಆರೋಪಗಳನ್ನು ನಿರಾಕರಿಸಿದ್ದು, ತಾವು ಅಥವಾ ಅವರ ಕುಟುಂಬ ಸದಸ್ಯರು ಯಾವುದೇ ಹಣವನ್ನು ಇಟ್ಟುಕೊಂಡಿಲ್ಲ ಎಂದೂ ಹೇಳಿಕೆ ನೀಡಿದ್ದಾರೆ.

ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡುವ ಕೊಲಿಜಿಯಂ ಶಿಫಾರಸನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಹಲವು ಬಾರ್‌ ಸಂಘಟನೆಗಳು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರಿಗೆ ಮನವಿ ಮಾಡಿದ್ದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries