HEALTH TIPS

GST, ತೆರಿಗೆ ವಿನಾಯಿತಿ ಕೇಳಬೇಡಿ: ಉದ್ಯಮಿಗಳೊಂದಿಗೆ ನಿತಿನ್ ಗಡ್ಕರಿ ಮನವಿ

ನವದೆಹಲಿ: ಬಡವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ನೀಡಬೇಕಿರುವುದರಿಂದ ದೀರ್ಘಕಾಲದವರೆಗೆ ತೆರಿಗೆ ವಿನಾಯಿತಿ ಕೋರಬೇಡಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಯಮಗಳಿಗೆ ಸೋಮವಾರ ಮನವಿ ಮಾಡಿದ್ದಾರೆ. 

ವಿಜಯಪುರ-ಹುಬ್ಬಳ್ಳಿ ಹೆದ್ದಾರಿ ಮೇಲ್ದರ್ಜೆಗೆ: ಗಡ್ಕರಿ ಭರವಸೆ

ನವದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಾರಿಗೆ ಹಾಗೂ ಹೆದ್ದಾರಿ ಸಚಿವ ಗಡ್ಕರಿ, ಇನ್ನೆರಡು ವರ್ಷಗಳಲ್ಲಿ ದೇಶದ ಸಾಗಣೆ ವೆಚ್ಚ ಶೇ 9ಕ್ಕೆ ತಗ್ಗಲಿದೆ ಎಂದು ಹೇಳಿದ್ದಾರೆ.

'ಜಿಎಸ್‌ಟಿ ಹಾಗೂ ತೆರಿಗೆ ವಿನಾಯಿತಿ ಕೋರಬೇಡಿ. ತೆರಿಗೆ ನಿರಂತರ ಪ್ರಕ್ರಿಯೆ. ಒಂದು ವೇಳೆ ನಾವು ತೆರಿಗೆ ಕಡಿಮೆ ಮಾಡಿದರೆ, ನೀವು ಇನ್ನೂ ಹೆಚ್ಚಿನದ್ದನ್ನು ಕೇಳುತ್ತೀರಿ. ಇದು ಮಾನವನ ಸಹಜ ಗುಣ' ಎಂದು ಹೇಳಿದ್ದಾರೆ.

'ತೆರಿಗೆ ಕಡಿಮೆ ಮಾಡಬೇಕು ಎನ್ನುವುದು ನಮಗೂ ಇದೆ. ಆದರೆ ತೆರಿಗೆ ಇಲ್ಲದೆ ಕಲ್ಯಾಣ ಕಾರ್ಯಕ್ರಮಗಳನ್ನು ಕೊಡಲು ಆಗುವುದಿಲ್ಲ. ಶ್ರೀಮಂತರಿಂದ ತೆರಿಗೆ ಪಡೆದುಕೊಂಡು ಬಡವರಿಗೆ ಪ್ರಯೋಜನಗಳನ್ನು ನೀಡುವುದು ಸರ್ಕಾರದ ಕೆಲಸ. ಸರ್ಕಾರಕ್ಕೂ ತನ್ನದೇ ಆದ ಮಿತಿಗಳಿವೆ ' ಎಂದಿದ್ದಾರೆ.

‌'ಸದ್ಯ ಭಾರತದ ಸಾಗಣೆ ವೆಚ್ಚ ಶೇ 14-15ರಷ್ಟಿದೆ. ಮುಂದಿನ 2 ವರ್ಷಗಳಲ್ಲಿ ಅದು ಶೇ 9ಕ್ಕೆ ಇಳಿಯಲಿದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಚೀನಾದ ಸಾಗಣೆ ವೆಚ್ಚ ಶೇ 8ರಷ್ಟಿದೆ. ಅಮೆರಿಕ ಹಾಗೂ ಯೂರೋಪ್‌ ದೇಶಗಳಲ್ಲಿ ಶೇ 12ರಷ್ಟಿದೆ' ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಬಂಡವಾಳ ಹೂಡಿಕೆಯಿಂದಾಗಿ ಹೆಚ್ಚಿನ ಉದ್ಯೋಗ ಸೃಜನೆಯಾಗುತ್ತಿವೆ. ನೀವು ಸಂಪತ್ತು ಸೃಷ್ಟಿಕರ್ತರು ಮಾತ್ರವಲ್ಲದೆ, ಉದ್ಯೋಗ ಸೃಷ್ಟಿಕರ್ತರೂ ಹೌದು. ಈ ಸುವರ್ಣ ಯುಗದ ಪ್ರಯೋಜನವನ್ನು ನಾವು ಬಳಸಿಕೊಳ್ಳಬೇಕು' ಎಂದು ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries