HEALTH TIPS

ಶತಾಬ್ಧಿ ರೈಲಿನ ಎ.ಸಿ ಕೋಚ್‌ನಲ್ಲಿ ಹೋಳಿ ಆಚರಣೆ: IRCTC ಸಿಬ್ಬಂದಿ ಬಂಧನ

ಕಾನ್ಪುರ:ರೈಲಿನ ಎ.ಸಿ ಕೋಚ್‌ನಲ್ಲಿ ಹೋಳಿ ಆಚರಿಸಿದ್ದಕ್ಕೆ ಐಆರ್‌ಸಿಟಿಸಿಯ ಪ್ಯಾಂಟ್ರಿ ಹಾಗೂ ಸ್ವಚ್ಛತಾ ಸಿಬ್ಬಂದಿಯನ್ನು ಆರ್‌ಪಿಎಫ್ ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.ದೆಹಲಿ-ಕಾನ್ಪುರ್ ಶತಾಬ್ದಿ ರೈಲಿನಲ್ಲಿ ಮಾರ್ಚ್ 14 ರಂದು ಈ ಘಟನೆ ನಡೆದಿತ್ತು.

ಇನ್‌ಸ್ಟಾಗ್ರಾಂ ಬಳಕೆದಾರರೊಬ್ಬರು ಆರ್‌ಪಿಎಫ್ ಅಧಿಕಾರಿಗೆ ಘಟನೆಯ ವಿಡಿಯೊ ಕಳುಹಿಸಿ ಕ್ರಮವಹಿಸುವಂತೆ ಆಗ್ರಹಿಸಿದ್ದರು.

ಐಆರ್‌ಸಿಟಿಸಿಯ ಪ್ಯಾಂಟ್ರಿ ಹಾಗೂ ಸ್ವಚ್ಛತಾ ವಿಭಾಗದ 12 ಸಿಬ್ಬಂದಿಗಳು ಘಟನೆಯಲ್ಲಿ ಭಾಗಿಯಾಗಿದ್ದರು. ಅವರನ್ನು ಬಂಧಿಸಲಾಗಿದೆ ಎಂದು ಕಾನ್ಪುರ್ ವಿಭಾಗದ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಅಂದು ಶತಾಬ್ಧಿ ರೈಲಿನ ಎ.ಸಿ ಕೋಚ್‌ನಲ್ಲಿ ಸಿಬ್ಬಂದಿಗಳು ಹೋಳಿ ಆಚರಿಸಿ ಬಣ್ಣ, ಗುಲಾಲ್ ಎರಚಿದ್ದರು. ಇದರಿಂದ ಪ್ರಯಾಣಿಕರಿಗೂ ತೊಂದರೆ ಆಗಿದ್ದಲ್ಲದೇ ರೈಲಿನ ಸ್ವಚ್ಚತೆಗೂ ದಕ್ಕೆ ಬಂದಿತ್ತು. ರೈಲ್ವೆ ಆಸ್ತಿ-ಪಾಸ್ತಿ ಹಾನಿ ಪ್ರಕರಣದ ಅಡಿ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆ ಸಿಬ್ಬಂದಿಯೇ ಈ ರೀತಿ ಮಾಡಿರುವುದು ಒಂದು ಗಂಭೀರ ಪ್ರಕರಣ ಎಂದು ಅವರು ತಿಳಿಸಿದ್ದಾರೆ. ಈ ಕುರಿತು ನ್ಯೂಸ್ 18 ವೆಬ್‌ಸೈಟ್ ವರದಿ ಮಾಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries