HEALTH TIPS

ರಾಣಾ ಸಂಗಾ 'ದೇಶದ್ರೋಹಿ' ಎಂದ SP ಸಂಸದನ ನಿವಾಸದ ಮೇಲೆ ಕರ್ಣಿ ಸೇನೆಯಿಂದ ದಾಳಿ

ಆಗ್ರಾ: ಸ್ಟ್ಯಾಂಡಪ್‌ ಕಾಮಿಡಿಯನ್‌ ಕುನಾಲ್ ಕಾಮ್ರಾ ಪ್ರಕರಣದ ಬೆನ್ನಲ್ಲೇ ಸಮಾಜವಾದಿ ರಾಜ್ಯಸಭಾ ಸದಸ್ಯ ರಾಮ್‌ಜಿ ಲಾಲ್‌ ಸುಮನ್‌ ಅವರ ಆಗ್ರಾ ನಿವಾಸದ ಮೇಲೆ ಬುಧವಾರ ಮಧ್ಯಾಹ್ನ ದಾಳಿ ನಡೆದಿದ್ದು, ಕರ್ಣಿ ಸೇನಾ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ.

ಸುಮನ್‌ ಅವರು ಮೇವಾಡದ ಅರಸ ರಾಣಾ ಸಂಗಾ ಅವರನ್ನು 'ದೇಶದ್ರೋಹಿ' ಎಂದು ಕರೆದಿರುವುದಕ್ಕೆ ಕೆರಳಿದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮಾರ್ಚ್‌ 21ರಂದು ರಾಜ್ಯಸಭೆಯಲ್ಲಿ ಮಾತನಾಡಿದ್ದ ಸುಮನ್‌ ಅವರು ರಾಣಾ ಸಂಗಾ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು.

'ಬಾಬರ್‌ನನ್ನು ಭಾರತಕ್ಕೆ ಕರೆತಂದವರು ಯಾರು? ಇಬ್ರಾಹಿಂ ಲೋಧಿಯನ್ನು ಸೋಲಿಸಲು ಬಾಬರ್‌ಗೆ ಆಹ್ವಾನ ನೀಡಿದ್ದು ರಾಣಾ ಸಂಗಾ. ಮುಸ್ಲಿಮರು ಬಾಬರ್‌ನ ಸಂತತಿ ಆದರೆ, ಹಿಂದೂಗಳು ದೇಶದ್ರೋಹಿ ರಾಣಾ ಸಂಗಾನ ವಂಶಸ್ಥರೇ? ನಾವು ಬಾಬರ್‌ನನ್ನು ಟೀಕಿಸುತ್ತೇವೆ. ಆದರೆ ರಾಣಾನನ್ನು ಟೀಕಿಸಲ್ಲ' ಎಂದು ಸುಮನ್‌ ಹೇಳಿದ್ದರು.

ಇಂದು ಮಧ್ಯಾಹ್ನ ಬುಲ್ಡೋಜರ್‌ ಸಮೇತ ಸುಮನ್‌ ಅವರ ನಿವಾಸ ತಲುಪಿದ್ದ ಕಾರ್ಯಕರ್ತರು, ಅಲ್ಲಿರುವ ವಸ್ತುಗಳನ್ನು ಚೆಲ್ಲಾಪಿಲ್ಲಿ ಎಸೆದು ಹಾನಿ ಮಾಡಿದ್ದಾರೆ.

ಏನತ್ಮಧ್ಯೆ, ಸುಮನ್ ಅವರ ಮುಖಕ್ಕೆ ಮಸಿ ಬಳಿದು ಬೂಟಿನಲ್ಲಿ ಹೊಡೆದವರಿಗೆ ಬಹುಮಾನವಾಗಿ ₹5 ಲಕ್ಷ ನೀಡುವುದಾಗಿಯೂ ಸಂಘಟನೆಯ ರಾಜ್ಯ ಘಟಕ ಘೋಷಿಸಿದೆ.

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಅವರನ್ನು 'ವಂಚಕ' ಎಂದು ಕುನಾಲ್ ಕಾಮ್ರಾ ಕರೆದಿದ್ದರು. ಇದರಿಂದ ಕೆರಳಿದ್ದ ಶಿವಸೇನಾ ಕಾರ್ಯಕರ್ತರು ಭಾನುವಾರ ರಾತ್ರಿ ಕಾರ್ಯಕ್ರಮ ನಡೆದ ಖಾರ್‌ನಲ್ಲಿರುವ ಹ್ಯಾಬಿಟೇಟ್‌ ಕಾಮಿಡಿ ಕ್ಲಬ್ ಇರುವ ಹೋಟೆಲ್‌ ಅನ್ನು ಹಾನಿಗೊಳಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries