ನವದೆಹಲಿ: 26/11ರ ಮುಂಬೈನಲ್ಲಿ ನಡೆದ ದಾಳಿಯ ಆರೋಪಿ ತಹವ್ವುರ್ ರಾಣಾನನ್ನು ಮತ್ತೆ 12 ದಿನ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಕಸ್ಟಡಿಗೆ ನೀಡಿ ದೆಹಲಿ ಕೋರ್ಟ್ ಸೋಮವಾರ ಆದೇಶಿಸಿದೆ.
ಈ ಮೊದಲಿನ 18 ದಿನಗಳ ಕಸ್ಟಡಿ ಮುಗಿದ ನಂತರ ಎನ್ಐಎ ಕೋರಿಕೆಯ ಮೇರೆಗೆ ವಿಶೇಷ ಎನ್ಐಎ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ರಾಣಾನ ಕಸ್ಟಡಿ ಅವಧಿಯನ್ನು ವಿಸ್ತರಿಸಿದರು.





