HEALTH TIPS

ದೆಹಲಿಗೆ ಅಪ್ಪಳಿಸಿದ ಧೂಳಿನ ಬಿರುಗಾಳಿ: 15 ವಿಮಾನಗಳ ಮಾರ್ಗ ಬದಲಾವಣೆ

ನವದೆಹಲಿ: ದೆಹಲಿಯ ಹಲವಾರು ಭಾಗಗಳಲ್ಲಿ ಶುಕ್ರವಾರ ಧೂಳಿನ ಬಿರುಗಾಳಿ ಬೀಸಿದ್ದು, ಕೆಲವು ಪ್ರದೇಶಗಳಲ್ಲಿ ಮರಗಳು ಬಿದ್ದಿವೆ. ನಿವಾಸಿಗಳು ಧೂಳು ತಡೆಯಲು ತಮ್ಮ ಮನೆಗಳಿಗೆ ಧೂಳು ಬರದಂತೆ ಕಿಟಕಿಗಳನ್ನು ಮುಚ್ಚಿದ್ದಾರೆ. ಒಟ್ಟು 15 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಧೂಳಿನ ಬಿರುಗಾಳಿಯಿಂದಾಗಿ ಇಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಹಲವಾರು ವಿಮಾನಗಳು ವಿಳಂಬವಾದವು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಪ್ರತಿಕೂಲ ಹವಾಮಾನದಿಂದಾಗಿ, ದೆಹಲಿ ವಿಮಾನ ನಿಲ್ದಾಣದಲ್ಲಿನ ಕೆಲವು ವಿಮಾನಗಳ ಹಾರಾಟದಲ್ಲಿ ಪರಿಣಾಮ ಬೀರಿದೆ. ಇತ್ತೀಚಿನ ವಿಮಾನ ನವೀಕರಣಗಳಿಗಾಗಿ ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ವಾಹಕರು ಮಾಹಿತಿ ನೀಡಿದ್ದಾರೆ

ದೆಹಲಿ ಮತ್ತು ಜೈಪುರ ಧೂಳಿನ ಬಿರುಗಾಳಿಯನ್ನು ಎದುರಿಸುತ್ತಿದ್ದು, ಟೇಕ್‌ ಆಫ್ ಮತ್ತು ಲ್ಯಾಂಡಿಂಗ್‌ ಗಳ ಮೇಲೆ ಪರಿಣಾಮ ಬೀರಿದೆ. ವಾಯು ಸಂಚಾರ ದಟ್ಟಣೆಯನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ಇಂಡಿಗೋ ತಿಳಿಸಿದೆ. ಇದು ವಿಳಂಬ ಅಥವಾ ಮಾರ್ಗ ಬದಲಾವಣೆಗೆ ಕಾರಣವಾಗಬಹುದು ಎಂದು ನಿರ್ವಾಹಕರು ತಿಳಿಸಿದ್ದಾರೆ.

ಮರಗಳು ಅಥವಾ ಕೊಂಬೆಗಳು ಉರುಳಿಬಿದ್ದ ಕಾರಣ ದೆಹಲಿಯೆ ಕೆಲವು ಕಡೆ ಸಂಚಾರಕ್ಕೆ ಅಡ್ಡಿಯಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries