HEALTH TIPS

ಮಾದಕ ವ್ಯಸನದ ವಿರುದ್ಧ ಕ್ರಿಯಾ ಯೋಜನೆ: ಏಪ್ರಿಲ್ 17 ರಂದು Àರ್ವಪಕ್ಷ ಸಭೆ ಕರೆದ ಸರ್ಕಾರ

ತಿರುವನಂತಪುರಂ: ಮಾದಕ ದ್ರವ್ಯ ಸೇವನೆಯ ವಿರುದ್ಧದ ಕ್ರಮಗಳ ಭಾಗವಾಗಿ ಏಪ್ರಿಲ್ 17 ರಂದು ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಸಂಪುಟ ಸಭೆಯ ನಿರ್ಧಾರಗಳನ್ನು ವಿವರಿಸಿದ ಮುಖ್ಯಮಂತ್ರಿ, ಮಾದಕ ದ್ರವ್ಯ ಸೇವನೆ ಹರಡುವುದನ್ನು ತಡೆಗಟ್ಟಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವ ಕಾರ್ಯವನ್ನು ಮುಖ್ಯ ಕಾರ್ಯದರ್ಶಿಗೆ ವಹಿಸಲಾಗಿದೆ ಎಂದು ಹೇಳಿದರು.

ಡಿ-ಹಂಟ್ ನ ಭಾಗವಾಗಿ 12 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಮಾರ್ಚ್ ತಿಂಗಳೊಂದರಲ್ಲೇ 12,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮುಖ್ಯಮಂತ್ರಿ ತಿಳಿಸಿರುವರು. ಆಪರೇಷನ್ ಡಿ'ಹಂಟ್ ಬಲವಾಗಿ ಮುಂದುವರಿಯಲಿದ್ದು, 'ಜೀವನವೇ ವ್ಯಸನ' ಎಂಬ ಘೋಷಣೆಯೊಂದಿಗೆ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮಾದಕ ವಸ್ತುಗಳ ವ್ಯಸನದ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿರಬೇಕು. ಶಾಲಾ ಕಾಲೇಜು ಆವರಣದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುವುದು. ಮಾದಕ ವ್ಯಸನದ ವಿರುದ್ಧದ ಯುದ್ಧವು ಮನೆಗಳಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಹೇಳಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries