HEALTH TIPS

ವಕ್ಫ್ ತಿದ್ದುಪಡಿ ವಿಧೇಯಕದ ವಿರುದ್ಧ ಮಂಜೇಶ್ವರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಎಪ್ರಿಲ್ 25 ಕ್ಕೆ

ಮಂಜೇಶ್ವರ : ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಎಲ್ಲಾ ಮುಸ್ಲಿಂ ಸಂಘಟನೆಗಳು ಒಂದಾಗಿ ರಾಷ್ಟ್ರಾದ್ಯಂತ ಭಾರೀ ಆಕ್ರೋಶಕ್ಕೆ ಗುರಿಯಾಗಿರುವ ವಕ್ಫ್ ತಿದ್ದುಪಡಿ ವಿಧೇಯಕ 25ನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ವಕ್ಫ್ ರಕ್ಷಣಾ ಸಮಿತಿ ನೇತೃತ್ವದಲ್ಲಿ ಕುಂಜತ್ತೂರಿನಿಂದ ಹೊಸಂಗಡಿ ತನಕ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ.

ಈ ಪ್ರತಿಭಟನಾ ರ್ಯಾಲಿಯಲ್ಲಿ ಮುಸ್ಲಿಂ ಸಂಘಟನೆಗಳ ಎಲ್ಲಾ ಧಾರ್ಮಿಕ ನೇತಾರರು, ಉಲಮಾ ಶಿರೋಮಣಿಗಳು ಹಾಗೂ ಜಾತ್ಯತೀರನ್ನು ಒಟ್ಟು ಗೂಡಿಸಿ ಭಾರೀ  ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಿರುವುದಾಗಿ ವಕ್ಫ್ ರಕ್ಷಣಾ ಸಮಿತಿ ಪ್ರಧಾನ ಸಂಚಾಲಕ ಎಸ್ ಎಂ ಬಶೀರ್ ಉದ್ಯಾವರದ ಸಮಿತಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ವಕ್ಫ್ ಸಂಕ್ಷಣಾ ಸಮಿತಿಯ ಸಭೆಯಲ್ಲಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳ ನೇತಾರರು, ಮಹಲ್ ಕಮಿಟಿ ಪದಾಧಿಕಾರಿಗಳು, ಸಾಮಾಜಿಕ, ರಾಜಕೀಯ ಕಾರ್ಯಕರ್ತರು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಳ್ಳಲಿರುವುದಾಗಿ ತಿಳಿಸಿದ ಅವರು

ಕೇಂದ್ರದಲ್ಲಿ ಅಧಿಕಾರಕ್ಕೇರಿದ ಫ್ಯಾಸಿಸ್ಟ್ ಸರ್ಕಾರ ಅಲ್ಪಸಂಖ್ಯಾತರ ಮೇಲೆ ಸವಾರಿಯನ್ನು ಮುಂದುವರಿಸುತ್ತಲೇ ಇದೆ. ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕುಗಳನ್ನು ಕಸಿದುಕೊಳ್ಳುವ ದುರುದ್ದೇಶಪೂರಿತ ಉದ್ದೇಶದಿಂದ ಜಾರಿಗೆ ತರುತ್ತಿರುವ ವಕ್ಫ್ ತಿದ್ದುಪಡಿ ಕಾನೂನು ಭಾರತೀಯ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಎಪ್ರಿಲ್ 25 ರಂದು ಶುಕ್ರವಾರ ಮಧ್ಯಾಹ್ನ 3ಕ್ಕೆ ನಡೆಯಲಿರುವ ಪ್ರತಿಭಟನಾ ರ್ಯಾಲಿಯಲ್ಲಿ ಎಲ್ಲಾ ಜಾತ್ಯಾತೀತರು ಪಾಲ್ಗೊಳ್ಳುವಂತೆ ಸಂರಕ್ಷಣಾ ಸಮಿತಿ ಪತ್ರಿಕಾಗೋಷ್ಟಿ ನಡೆಸಿ ವಿನಂತಿಸಿಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಎಸ್ ವೈಸ್ ಜಿಲ್ಲಾ ಎಕ್ಸಿಕ್ಯೂಟಿವ್ ಸಿದ್ದೀಕ್ ಕೋಳ್ಯೂರು, ಎಸ್ ಕೆ ಎಸ್ ಎಸ್ ಎಫ್ ಕಾರ್ಯದರ್ಶಿ ರವೂಫ್ ಫೈಝಿ, ಸಮಿತಿ ಸಲಹೆಗಾರ ಸೈಯದ್ ಮೋಯಿನ್ ತಂಙಳ್,  ಹಸೈನಾರ್, ಅಶ್ರಫ್ ಬಡಾಜೆ, ಜಬ್ಬಾರ್ ಬಹರೈನ್, ಅಶ್ರಫ್ ಕುಂಜತ್ತೂರು, ಜಾಸಿಂ ಕಡಂಬಾರ್, ಹನೀಫ್ ಕುಚ್ಚಿಕ್ಕಾಡ್, ಝಕರಿಯ ಶಾಲಿಮಾರ್, ಮುಸ್ತಫ ಉದ್ಯಾವರ, ಮುಸ್ತಫ ಕುಂಜತ್ತೂರು, ಝಕರಿಯ್ಯ ಮಂಜೇಶ್ವರ, ಆಲಿ ಕುಟ್ಟಿ, ಶೆರೀಫ್ ಪಾವೂರು, ಝಕರಿಯ, ಹನೀಫ್ ಪಡಿಞರ್ ಮೊದಲಾದವರು ಪಾಲ್ಗೊಂಡರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries