HEALTH TIPS

ವಯನಾಡ್‌ ಭೂಕುಸಿತ ಸಂತ್ರಸ್ತರ ಸಾಲಮನ್ನಾ ಸಾಧ್ಯವಿಲ್ಲ: ಕೇಂದ್ರ

ಕೊಚ್ಚಿ (PTI): ವಯನಾಡ್‌ನಲ್ಲಿ ಕಳೆದ ವರ್ಷ ಜುಲೈನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟಕ್ಕೊಳಗಾದ ಜನರ ಸಾಲವನ್ನು ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಕೇರಳ ಹೈಕೋರ್ಟ್‌ಗೆ ತಿಳಿಸಿದೆ.

ಬದಲಾಗಿ, ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ಅನ್ವಯವಾಗುವ ಆರ್‌ಬಿಐ ಸೂಚನೆಯ ಅನುಸಾರವಾಗಿ ಅವರ ಸಾಲದ ಮರುಪಾವತಿ ಅವಧಿಯನ್ನು ಮರುನಿಗದಿ ಮಾಡಬಹುದು ಎಂದು ತಿಳಿಸಿದೆ.

ನೈಸರ್ಗಿಕ ವಿಕೋಪ ಸಂದರ್ಭದಲ್ಲಿ, ಸಾಲದ ಮರುಪಾವತಿ ಅವಧಿಯನ್ನು ಮುಂದೂಡಲು ಮತ್ತು ಹೊಸ ಸಾಲ ತೆಗೆದುಕೊಳ್ಳಲು ಆರ್‌ಬಿಐ ನಿಯಮವು ಅನುವು ಮಾಡಿಕೊಡುತ್ತದೆ.

ಸಂತ್ರಸ್ತರು ಪಡೆದ ಸಾಲವನ್ನು ಮನ್ನಾ ಮಾಡಬಹುದೇ ಎಂದು ತಿಳಿಸುವಂತೆ ಕೋರ್ಟ್‌ ಸರ್ಕಾರವನ್ನು ಕೇಳಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವಾಲಯವು, ಕಳೆದ ವರ್ಷ ಆಗಸ್ಟ್‌ 19ರಂದು ರಾಜ್ಯಮಟ್ಟದ ಬ್ಯಾಂಕ್ ಅಧಿಕಾರಿಗಳ ಸಮಿತಿಯೊಂದಿಗೆ ವಿಶೇಷ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೂ ಭಾಗಿಯಾಗಿದ್ದರು. ಸಭೆಯಲ್ಲಿ ಆರ್‌ಬಿಐ ಸೂಚನೆ ಪ್ರಕಾರ ಅನ್ವಯವಾಗುವ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries