HEALTH TIPS

ಕೊಚ್ಚಿಯ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಘರ್ಷಣೆ: ವಕೀಲರು ಮತ್ತು ಎಸ್‍ಎಫ್‍ಐ ಕಾರ್ಯಕರ್ತರ ನಡುವೆ ಮಾರಾಮಾರಿ: ಮಾರಕಾಸ್ತ್ರಗಳಿಂದ ಹಲ್ಲೆ

ಕೊಚ್ಚಿ: ಜಿಲ್ಲಾ ವಕೀಲರ ಸಂಘದ ಆಚರಣೆಯ ಸಂದರ್ಭದಲ್ಲಿ ಎರ್ನಾಕುಳಂ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು ಮತ್ತು ಎಸ್‍ಎಫ್‍ಐ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯರಾತ್ರಿ ಎರಡೂ ಗುಂಪುಗಳ ನಡುವೆ ಘರ್ಷಣೆ ನಡೆದಿತ್ತೆಂದು ತಿಳಿದುಬಂದಿದೆ. 

ಘರ್ಷಣೆಯಲ್ಲಿ 16 ಎಸ್‍ಎಫ್‍ಐ ಕಾರ್ಯಕರ್ತರು ಮತ್ತು 8 ಮಂದಿ ವಕೀಲರು ಗಾಯಗೊಂಡರು. ಮಹಾರಾಜ ಕಾಲೇಜಿನಲ್ಲಿ ಎಸ್‍ಎಫ್‍ಐ ಕಾರ್ಯಕರ್ತರು ಬಾರ್ ಅಸೋಸಿಯೇಷನ್‍ನ ವಾರ್ಷಿಕೋತ್ಸವದೊಳಗೆ ಮಾರಕ ಆಯುಧಗಳೊಂದಿಗೆ ನುಸುಳಿ ತೊಂದರೆ ಸೃಷ್ಟಿಸಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ. ಇದೇ ವೇಳೆ, ವಕೀಲರು ನ್ಯಾಯಾಲಯದ ಮುಂದೆ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ಅವರನ್ನು ಪ್ರಶ್ನಿಸಿದಾಗ ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಎಸ್.ಎಫ್.ಐ ಕಾರ್ಯಕರ್ತರು ಹೇಳಿದ್ದಾರೆ. 

ವಕೀಲರು ಕುಡಿದು ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿದ್ದರು ಮತ್ತು ಇದನ್ನು ಪ್ರಶ್ನಿಸಿದ್ದಕ್ಕಾಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಯಿತು ಎಂಬುದು ಎಸ್.ಎಫ್.ಐ ನೀಡಿರುವ ಪ್ರತಿಕ್ರಿಯೆಯಾಗಿದೆ. ಘರ್ಷಣೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಪೋಲೀಸ್ ತಂಡವೊಂದು ಸ್ಥಳದಲ್ಲಿ ಮೊಕ್ಕಾಂ ಹೂಡಿದೆ. ಘರ್ಷಣೆಯನ್ನು ನಿಯಂತ್ರಿಸಲು ಬಂದ ಪೋಲೀಸರೂ ಗಾಯಗೊಂಡರು. ಪೋಲೀಸರ ಮುಂದೆಯೂ ಎರಡೂ ಗುಂಪುಗಳು ಘರ್ಷಣೆ ನಡೆಸಿದವು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries