HEALTH TIPS

ಬನಾರಿಯಲ್ಲಿ ಸೇವಾ ತಾಳಮದ್ದಳೆ

ಮುಳ್ಳೇರಿಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ  ನಾಗರಾಜ ಪಂಜತ್ತಡ್ಕ ಕಾವು ಹಾಗೂ ಮನೆಯವರ ವತಿಯಿಂದ ವಿಶೇಷ ಯಕ್ಷಗಾನ ತಾಳಮದ್ದಳೆ ಶನಿವಾರ ಜರಗಿತು. ಕಾರ್ಯಕ್ರಮದ ಮೊದಲಿಗೆ ಸ್ಥಳ ಸಾನ್ನಿಧ್ಯ ಶ್ರೀ ಗೋಪಾಲಕೃಷ್ಣದೇವರಿಗೆ ಪೂಜಾರ್ಚನೆ ಸಲ್ಲಿಸಲಾಯಿತು.

ಕಲಾಸಂಘದ ಅಧ್ಯಕ್ಷ, ಹಿರಿಯ ಸಾಹಿತಿ ಅರ್ಥಧಾರಿ ಡಾ. ರಮಾನಂದ ಬನಾರಿ ಅವರ ಮಾರ್ಗದರ್ಶನದಲ್ಲಿ, ಭಾಗವತ ಗುರುಗಳಾದ ವಿಶ್ವವಿನೋದ ಬನಾರಿ ಅವರ ಸಂಯೋಜನೆಯೊಂದಿಗೆ ಮುನ್ನಡೆದ ಯಕ್ಷಗಾನ ತಾಳಮದ್ದಳೆ "ಪಾರ್ಥ ಸಾರಥ್ಯ" ಅತ್ಯಂತ ಮನೋಹರವಾಗಿ ಮೂಡಿಬಂತು.


ಭಾಗವತಿಕೆಯಲ್ಲಿ  ಮೋಹನ ಮೆಣಸಿನಕಾನ, ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಸಹಕರಿಸಿದರು. ಚೆಂಡೆಮದ್ದಳೆ ವಾದಕರಾಗಿ ಶ್ರೀಧರ ಆಚಾರ್ಯ ಈಶ್ವರಮಂಗಲ, ಮಂಡೆಕೂಲು ಅಪ್ಪಯ್ಯ ಮಣಿಯಾಣಿ, ವಿಷ್ಣು ಶರಣ ಬನಾರಿ, ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ, ಸದಾನಂದ ಮಯ್ಯಾಳ ಭಾಗವಹಿಸಿದ್ದರು. ಅರ್ಥಗಾರಿಕೆಯಲ್ಲಿ  ರಾಮಣ್ಣ ಮಾಸ್ತರ್ ದೇಲಂಪಾಡಿ, ಐತಪ್ಪ ಗೌಡ ಮುದಿಯಾರು, ವೀರಪ್ಪ ಸುವರ್ಣ ಬೆಳ್ಳಿಪ್ಪಾಡಿ, ಶಾಂತಕುಮಾರಿ ದೇಲಂಪಾಡಿ,  ಶ್ರೀನಿಧಿ ಮಯ್ಯಾಳ, ಮಾಷ್ಟರ್ ಶ್ರೀದೇವ್ ಈಶ್ವರಮಂಗಲ ತಮ್ಮ ಕಲಾ ಪ್ರೌಡಿಮೆಯನ್ನು ತೋರಿಸಿಕೊಟ್ಟರು. ಪೂಜಾ ಸಿ. ಎಚ್ ಸ್ವಾಗತಿಸಿ, ಪಾತ್ರ ಪರಿಚಯ ಮಾಡಿಕೊಟ್ಟರು. ನಂದ ಕಿಶೋರ ಬನಾರಿ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries