HEALTH TIPS

ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದಿಂದ ತಾಳಮದ್ದಳೆ

ಮುಳ್ಳೇರಿಯ: ಬೆಳ್ಳಿಪ್ಪಾಡಿಯ ನಿವೃತ್ತ ಅಧ್ಯಾಪಕ ಬಿ.ಹುಕ್ರಪ್ಪ ಗೌಡ ಅವರಸ್ವಗೃಹ 'ಶ್ರೀರಾಮಾಂಜನೇಯ'ದ ನೂತನ ಗೃಹಪ್ರವೇಶೋತ್ಸವದ ಹಿನ್ನೆಲೆಯಲ್ಲಿ ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಸದಸ್ಯರಿಂದ ಶಕ್ರಜಿತು   ಆಖ್ಯಾಯಿಕೆಯ ಯಕ್ಷಗಾನ ತಾಳಮದ್ದಳೆ ನಡೆಯಿತು.

ಸಂಘದ ಹಿರಿಯ ಭಾಗವತ, ಗುರು ವಿಶ್ವವಿನೋದ ಬನಾರಿಯವರ ಸಂಯೋಜನೆಯಲ್ಲಿ ಮುನ್ನಡೆದ ತಾಳಮದ್ದಳೆಯ ಹಿಮ್ಮೇಳದಲಲಿ ಭಾಗವತರಾಗಿ ಮೋಹನ ಮೆನಸಿನಕಾನ, ಕುಮಾರಿ ವಿದ್ಯಾಶ್ರೀ ಆಚಾರ್ಯ, ಈಶ್ವರಮಂಗಲ, ಅಂಕುಶ್ ಎಣ್ಣೆಮಜಲು ಸಹಕರಿಸಿದರು. ಚೆಂಡೆ ಮದ್ದಳೆ  ವಾದನದಲ್ಲಿ ಶ್ರೀಧರ ಆಚಾರ್ಯ ಈಶ್ವರಮಂಗಲ, ಅಪ್ಪಯ್ಯ ಮಣಿಯಾಣಿ ಮಂಡೆಕೋಲು, ವಿಷ್ಣು ಶರಣ ಬನಾರಿ, ಬಿ.ಎಚ್.ಕೃಷ್ಣ ಪ್ರಸಾದ ಬೆಳ್ಳಿಪ್ಪಾಡಿ  ಸಹಕರಿಸಿದರು. ಅರ್ಥಧಾರಿಗಳಾಗಿ ಬೆಳ್ಳಿಪ್ಪಾಡಿ ಸದಾಶಿವ ರೈ, ಐತಪ್ಪ ಗೌಡ ಮುದಿಯಾರು, ಯಂ. ಬಾಲಕೃಷ್ಣ ಗೌಡ ದೇಲಂಪಾಡಿ, ಎಂ.ರಮಾನಂದ ರೈ ದೇಲಂಪಾಡಿ, ಡಿ.ರಾಮಣ್ಣ ಮಾಸ್ತರ್ ದೇಲಂಪಾಡಿ, ನಾರಾಯಣ ದೇಲಂಪಾಡಿ, ರಾಮನಾಯ್ಕ ಬಸಿರಡ್ಕ, ಶಾಂತಾಕುಮಾರಿ ದೇಲಂಪಾಡಿ, ಮಾಸ್ಟರ್ ಶ್ರೀದೇವ್ ಈಶ್ವರಮಂಗಲ ಅವರು ತಮ್ಮ ಕಲಾ ಪ್ರೌಢಿಮೆಯಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. 

ಈ ಸಂದರ್ಭದಲ್ಲಿ ಕಲಾವಿದರನ್ನು ವ್ಯವಸ್ಥಾಪಕರು ಶಾಲು ಹೊದಿಸಿ ಗೌರವಿಸಿದರು. ಹಿರಿಯ ಕಲಾವಿದ ಬೆಳ್ಳಿಪ್ಪಾಡಿ ಸದಾಶಿವ ರೈ ಅವರು ಸಂದರ್ಭೋಚಿತ ಮಾತನಾಡಿದರು. ಜಯರಾಜ್ ಬಿ.ಎಚ್ ವಂದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries