HEALTH TIPS

ಮೆಹುಲ್ ಚೋಕ್ಸಿ ಬಂಧನ ಭಾರತದ ರಾಜತಾಂತ್ರಿಕತೆಯ ಗೆಲುವು: ಕಾನೂನು ಸಚಿವ ಮೇಘವಾಲ್‌

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿಯ ಬಂಧನ ಮೋದಿ ಸರ್ಕಾರದ ರಾಜತಾಂತ್ರಿಕತೆಯ ಗೆಲುವು ಎಂದು ಕಾನೂನು ಸಚಿವ ಅರ್ಜುನ್ ರಾಮ್‌ ಮೇಘವಾಲ್‌ ತಿಳಿಸಿದ್ದಾರೆ.

'ಭಾರತ ಹೆಮ್ಮೆ ಪಡುವ ವಿಚಾರವಿದು, ಸರ್ಕಾರದ ರಾಜತಾಂತ್ರಿಕ ಮಾತುಕತೆಯ ಯಶಸ್ಸಿನಿಂದಾಗಿ ಚೋಕ್ಸಿಯ ಬಂಧನ ಸಾಧ್ಯವಾಯಿತು' ಎಂದು ಸಚಿವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂನಲ್ಲಿ ಪೊಲೀಸರು ಬಂಧಿಸಿದ್ದಾರೆ .

ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ನಿಂದ ₹13,850 ಕೋಟಿ ಸಾಲ ಪಡೆದಿದ್ದ ವಜ್ರದ ವ್ಯಾಪಾರಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ, ಸಾಲ ಮರುಪಾವತಿಸದೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದರು. ಇವರಿಬ್ಬರಿಗಾಗಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಹುಡುಕಾಟ ನಡೆಸುತ್ತಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries