ಕಾಸರಗೋಡು: ಬೇಕಲ ರಾಮ ನಾಯಕರದ್ದು ಸಾಹಿತ್ಯ ಸರಸ್ವತಿಯ ಮನಸ್ಸಾಗಿದ್ದು, ಅವರ ನಿಸ್ವಾರ್ಥ ಸಾಹಿತ್ಯ ಸೇವೆಯು ಸಾರ್ವಕಾಲಿಕ ಆದರ್ಶ, ಸರ್ವರೂ ಒಂದಾಗಿ, ಸಹಬಾಳ್ವೆ ನಡೆಸಬೇಕೆಂಬ ಅರ್ಪಣಾ ಮನೋಭಾವ ಅವರ ಕೃತಿಗಳಲ್ಲಿ ಅಡಕವಾಗಿರುವುದಾಗಿ ಎಂದು ಸಾಹಿತಿ ಚಂದ್ರಹಾಸ ಎಂ ಬಿ ಚಿತ್ತಾರಿ ಹೇಳಿದರು.
ಅವರು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ಡಾ. ವಾಮನ್ ಬೇಕಲ್ ಸ್ಥಾಪಕ ಸಂಚಾಲಕತ್ವದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡಿನ ಜಿಲ್ಲಾ ಘಟಕದ ನೇತೃತ್ವದಲ್ಲಿ ಕೊಡಗು ಜಿಲ್ಲಾ ಕನ್ನಡ ಭವನ,ಕೊಡಗು ಜಿಲ್ಲಾ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಕಾಸರಗೋಡಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಅಗ್ರಗಣ್ಯ ಸಾಹಿತಿ, ಇತಿಹಾಸ ಶಿಕ್ಷಕ ಮತ್ತು ಸಂಶೋಧಕ ಬೇಕಲ ರಾಮ ನಾಯಕರ ಬದುಕು-ಬರಹದ ಕುರಿತಾದ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಸಂಸ್ಮರಣಾ ಭಾಷಣ ಮಾಡಿದರು.
ಸಾಮಾಜಿಕ, ಧಾರ್ಮಿಕ ಮುಖಂಡ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಸಮಾರಂಭ ಉದ್ಘಾಟಿಸಿದರು. ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಸಾಹಿತಿ, ಪತ್ರಕರ್ತ ವಿರಾಜ್ ಅಡೂರು ಅಧ್ಯಕ್ಷತೆ ವಹಿಸಿದ್ದರು.
ಕಾಸರಗೋಡಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾರ್ಥಿ ಸೋಮು ಎಸ್ ಹಿಪ್ಪರಗಿ, ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ, ಕಾಸರಗೋಡು ಜಿಲ್ಲಾ ರಾಮರಾಜ ಕ್ಷತ್ರಿಯ ಕೋಟೆಯಾರ್ ಸೇವಾ ಸಂಘದ ಅಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ, ಕೊಡಗು ಜಿಲ್ಲಾ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ರುಬೀನಾ ಎಂ ಎ, ಮುಖಂಡರಾದ ಚಂದನ್ ನಂದರಬೆಟ್ಟು, ಅರುಣ್. ಲೋಹಿತ್ ಎಂ ಆರ್. ಗಿರೀಶ್ ಪಿ ಎಂ ಚಿತ್ತಾರಿ, ಪ್ರಕಾಶಕಿ ಸಂಧ್ಯಾರಾಣಿ ಟೇಚರ್, ಕಾಸರಗೋಡು ಜಿಲ್ಲಾ ಘಟಕದ ಕಾರ್ಯದರ್ಶಿ ದೇವರಾಜ್ ಆಚಾರ್ಯ ಸೂರಂಬೈಲ್, ವಸಂತ ಕೆರೆಮನೆ, ರಾಜೇಶ್ ಕೋಟೆಕಣಿ ಉಪಸ್ಥಿತರಿದ್ದರು.
ಈ ಸಂದರ್ಭಕಾಸರಗೋಡಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿದ್ಯಾರ್ಥಿ ಸಯ್ಯದ್ ಅವರಿಂದ ಗಾಯನ ಕಾರ್ಯಕ್ರಮ ನಡೆಯಿತು. ನಂತರ ಹಿರಿಯ ಸಾಹಿತಿ ಕೆ ನರಸಿಂಹ ಭಟ್ ಏತಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ವಸಂತ ಚುಟುಕು ಕವಿಗೋಷ್ಠಿಯಲ್ಲಿ ಕಾಸರಗೋಡು ಹಾಗೂ ಕೊಡಗು ಜಿಲ್ಲೆಯ ಸುಮಾರು 20 ಕವಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪ್ರಥಮ ಚುಟುಕು ರಚನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕಾಸರಗೋಡು ಜಿಲ್ಲಾ ಚುಟುಕು ಕಾವ್ಯ ಪ್ರಶಸ್ತಿ-2025 ನೀಡಿ ಗೌರವಿಸಲಾಯಿತು. ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅವರಿಗೆ ಬೇಕಲ ರಾಮ ನಾಯಕ ಸಾಹಿತ್ಯ ಪ್ರಶಸ್ತಿ ಹಾಗೂ ಸಂಘಟಕ ಮಂಗಳೂರಿನ ಡಾ.ರವೀಂದ್ರ ಜೆಪ್ಪು ಅವರಿಗೆ ಬೇಕಲ ರಾಮ ನಾಯಕ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಧ್ಯಾರಾಣಿ ಟೀಚರ್ ನೇತೃತ್ವದ ಕನ್ನಡ ಭವನ ಪ್ರಕಾಶನದ 7ನೇ ಕೃತಿಯಾದ, ಕವಯತ್ರಿ ಮೇಘಾ ಶಿವರಾಜ್ ಕಾಸರಗೋಡು ಅವರ 'ಮೌನ ಮಾತಾದಾಗ' ಕವನ ಸಂಕಲನವನ್ನು ಡಾ. ರವೀಂದ್ರ ಜೆಪ್ದು ಕವನ ಸಂಕಲನವನ್ನು ಬಿಡುಗಡೆ ಮಾಡಿದರು. ಡಾ. ಕೊಳ್ಚಪ್ಪೆ ಗೋವಿಂದ ಭಟ್ ಕೃತಿ ಪರಿಚಯ ಮಾಡಿದರು. ಸುಭಾಷಿಣಿ ಚಂದ್ರ ಕನ್ನಟಿಪ್ಪಾರ ಪ್ರಾರ್ಥನೆ ಹಾಡಿದರು. ವಿಜಯರಾಜ ಪುಣಿಂಚಿತ್ತಾಯ ಬೆಳ್ಳೂರು ಸ್ವಾಗತಿಸಿದರು. ಕಸಾಪ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಸಂಘಟನೆಯ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ವಂದಿಸಿದರು. ಈ ಸಂದರ್ಭದಲ್ಲಿ ಕಾಶ್ಮೀರ ಹುತಾತ್ಮರೀಗೆ ಮೌನ ಪ್ರಾರ್ಥನೆಯ ಮೂಲಕ ಶ್ರದ್ದಾಂಜಲಿ ಅರ್ಪಿಸಲಾಯಿತು.





