HEALTH TIPS

ಪಹಲ್ಗಾಮ್ ದಾಳಿಗೆ ಖಂಡನೆ; ನೇಪಾಳದಲ್ಲಿ ಪಾಕ್ ರಾಯಭಾರ ಕಚೇರಿ ಎದುರು ಪ್ರತಿಭಟನೆ

ಕಠ್ಮಂಡು : ಭಾರತದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ 'ನಾಗರಿಕ ಯುವ ಶಕ್ತಿ ನೇಪಾಳ' ಸಂಘಟನೆ ಕಠ್ಮಂಡುವಿನಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿ ಹೊರಗೆ ಶನಿವಾರ ಪ್ರತಿಭಟನೆ ನಡೆಸಿದೆ.

ದಾಳಿ ವೇಳೆ ಮೃತಪಟ್ಟ ಸುದೀಪ್‌ ನ್ಯೂಪನೆ (27) ಅವರ ಭಾವಚಿತ್ರ ಹಾಗೂ 'ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿ', 'ಉಗ್ರರನ್ನು ಶಿಕ್ಷಿಸಿ' ಹಾಗೂ 'ಹಿಂದೂಗಳ ಹತ್ಯೆ ನಿಲ್ಲಿಸಿ' ಎಂಬಿತ್ಯಾದಿ ಬರಹಗಳಿದ್ದ ಪೋಸ್ಟರ್‌ಗಳನ್ನು ಹಿಡಿದಿದ್ದ ಹಲವು ಯುವಕರು ದಾಳಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದ್ದಾರೆ.

ಸುದೀಪ್‌ ಅವರು ಪಶ್ಚಿಮ ನೇಪಾಳದ ಬುಟವಾಲ್‌ ನಗರದವರು.

ಅವರ ಹತ್ಯೆಯನ್ನು ಖಂಡಿಸಿ, ರಾಷ್ಟ್ರೀಯ ಪ್ರಜಾತಂತ್ರ ಪಕ್ಷ ಸಹ ಪಾಕಿಸ್ತಾನ ರಾಯಭಾರ ಕಚೇರಿ ಎದುರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ (ಏಪ್ರಿಲ್‌ 22ರಂದು) ಗುಂಡಿನ ದಾಳಿ ನಡೆಸಿದ್ದರು. 26 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries