HEALTH TIPS

ವಯನಾಡು ಪುನರ್ವಸತಿಗಾಗಿ ಭೂಸ್ವಾಧೀನ: ಎಲ್ಸ್ಟನ್ ಎಸ್ಟೇಟ್ ಮಾಲೀಕರ ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಯನಾಡಿನ ಮುಂಡಕೈ-ಚುರಲ್ಮಲಾ ಭೂಕುಸಿತ ದುರಂತದಲ್ಲಿ ಸಂತ್ರಸ್ಥರ ಪುನರ್ವಸತಿಗಾಗಿ ಟೌನ್‍ಶಿಪ್ ನಿರ್ಮಿಸಲು ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಹಿಡಿಯಬೇಕೆಂದು ಕೋರಿ ಎಲ್ಸ್ಟನ್ ಎಸ್ಟೇಟ್ ಮಾಲೀಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸರ್ಕಾರದ ವಿರುದ್ದ ಹಸ್ತಕ್ಷೇಪ ಮಾಡಬಾರದು ಮತ್ತು ಈ ವಿಷಯವನ್ನು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ತಿಳಿಸಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಟೌನ್‍ಶಿಪ್ ನಿರ್ಮಾಣಕ್ಕಾಗಿ ಎಸ್ಟೇಟ್‍ನಿಂದ 78.73 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಕ್ರಮಗಳನ್ನು ಪ್ರಾರಂಭಿಸಿದೆ. ಇದಕ್ಕೂ ಮೊದಲು, ಹೈಕೋರ್ಟ್‍ನ ಏಕ ಪೀಠವು ಎಸ್ಟೇಟ್ ಅನ್ನು ಸ್ವಾಧೀನಪಡಿಸಿಕೊಳ್ಳಲು ಅನುಮತಿ ನೀಡಿತ್ತು. ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು.

2013 ರ ಭೂಸ್ವಾಧೀನ ಕಾಯ್ದೆಯಡಿಯಲ್ಲಿ ಪೂರ್ಣ ಪರಿಹಾರವಿಲ್ಲದೆ ಎಸ್ಟೇಟ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ನಿಷೇಧಿಸುವುದು ಅರ್ಜಿಯಲ್ಲಿನ ಪ್ರಮುಖ ಬೇಡಿಕೆಯಾಗಿತ್ತು. ಬೇಡಿಕೆಯಿರುವ ಪರಿಹಾರ ಮೊತ್ತ 1063 ಕೋಟಿ ರೂ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries