HEALTH TIPS

ಜಾಗ ತೆರವುಗೊಳಿಸಲು ಪರಿಶಿಷ್ಟ ಕುಟುಂಬಗಳಿಗೆ ನೀಡಿದ್ದ ನೋಟಿಸ್ ರದ್ದು

ಹಾಪುಡ: ಉತ್ತರ ಪ್ರದೇಶದ ಗಢಮುಕ್ತೇಶ್ವರದಲ್ಲಿ ಪರಿಶಿಷ್ಟ ಜಾತಿ ಕುಟುಂಬಗಳು ಅಕ್ರಮವಾಗಿ ಜಾಗ ಒತ್ತುವರಿ ಮಾಡಿಕೊಂಡ ಆರೋಪದ ಮೇರೆಗೆ ಆ ಜಾಗ ತೆರವುಗೊಳಿಸುವಂತೆ ಸೂಚಿಸಿ ನೀಡಲಾಗಿದ್ದ ನೋಟಿಸ್ ಅನ್ನು ಹಾಪುಡ ಜಿಲ್ಲಾಡಳಿತವು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. 

ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಏಪ್ರಿಲ್ 8ರಂದು ನೋಟಿಸ್ ನೀಡಿದ್ದ ನಗರ ಪಾಲಿಕೆಯು, 15 ದಿನಗಳಲ್ಲಿ ಜಾಗ ತೆರವುಗೊಳಿಸಬೇಕು ಎಂದು ಸೂಚಿಸಿತ್ತು.

ಈ ಕುರಿತು ಶನಿವಾರ ಪ್ರತಿಕ್ರಿಯಿಸಿದ ಹಾಪುಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಸಂದೀಪ್ ಕುಮಾರ್, 'ಜಾಗ ತೆರವುಗೊಳಿಸುವಂತೆ ಸೂಚಿಸಿ 41 ನಿವಾಸಿಗಳಿಗೆ ನಗರಪಾಲಿಕೆ ನೀಡಿದ್ದ ನೋಟಿಸ್ ಅನ್ನು ಹಿಂಪಡೆಯಲಾಗಿದೆ. ಈ ಪ್ರಕರಣದ ಇತ್ಯರ್ಥಕ್ಕಾಗಿ ಜಿಲ್ಲಾಧಿಕಾರಿ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಪ್ರಕರಣದಲ್ಲಿನ ಎಲ್ಲ ಪಕ್ಷಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ, 15 ದಿನಗಳಲ್ಲಿ ವರದಿ ನೀಡಲಿದೆ' ಎಂದಿದ್ದಾರೆ.

ಕಂದಾಯ ದಾಖಲೆಗಳಲ್ಲಿ ಕೆರೆ ಎಂಬುದಾಗಿ ದಾಖಲಾಗಿದ್ದ ಜಾಗವನ್ನು 1986ರಲ್ಲಿ ಗುಢಮುಕ್ತೇಶ್ವರ ಮುನ್ಸಿಪಾಲಿಟಿ ಶುಲ್ಕ ಪಡೆದು ಇಲ್ಲಿನ ನಿವಾಸಿಗಳಿಗೆ ಪರಭಾರೆ ಮಾಡಿಕೊಟ್ಟಿದೆ ಎಂಬ ವಿಚಾರ ತಿಳಿದ ಬೆನ್ನಲ್ಲೇ, ಈ ಬಗ್ಗೆ ವಿಸ್ತೃತ ತನಿಖೆಗೆ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries