HEALTH TIPS

ಮಥುರಾ ವಿವಾದ: ಅರ್ಜಿಯ ವಿಚಾರಣೆ ಮುಂದಕ್ಕೆ

ನವದೆಹಲಿ: ಮಥುರಾ ಕೃಷ್ಣ ಜನ್ಮಭೂಮಿ - ಶಾಹಿ ಈದ್ಗಾ ವಿವಾದದಲ್ಲಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯನ್ನು (ಎಎಸ್‌ಐ) ಪ್ರತಿವಾದಿಗಳನ್ನಾಗಿಸಲು ಹಿಂದೂ ಅರ್ಜಿದಾರರಿಗೆ ಅವಕಾಶ ನೀಡಿದ ಹೈಕೋರ್ಟ್‌ನ ಕ್ರಮ ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ.

ಎಎಸ್‌ಐ ಮತ್ತು ಕೇಂದ್ರ ಗೃಹ ಸಚಿವಾಲಯವನ್ನು ಪ್ರತಿವಾದಿಗಳನ್ನಾಗಿಸಲು ಅಲಹಾಬಾದ್ ಹೈಕೋರ್ಟ್‌ ಮಾರ್ಚ್‌ 5ರಂದು ಅವಕಾಶ ಕಲ್ಪಿಸಿತ್ತು. ಎರಡು ಅರ್ಜಿಗಳಲ್ಲಿ ತಿದ್ದುಪಡಿ ತರುವುದಕ್ಕೆ ಕೂಡ ಹೈಕೋರ್ಟ್‌ ಒಪ್ಪಿತ್ತು.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರು ಇರುವ ವಿಭಾಗೀಯ ಪೀಠವು, ಅರ್ಜಿಗಳಲ್ಲಿ ತಿದ್ದುಪಡಿ ತರುವುದಕ್ಕೆ ಒಪ್ಪಿಗೆ ನೀಡಿರುವುದರಲ್ಲಿ ಮೇಲ್ನೋಟಕ್ಕೆ ಯಾವುದೇ ತಪ್ಪು ಇಲ್ಲ ಎಂದು ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries