HEALTH TIPS

ಛತ್ತೀಸಗಢ: ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತ

 ರಾಯಪುರ: ಛತ್ತೀಸಗಢದ ಬಸ್ತರ್‌ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದರು.

ಮೃತ ನಕ್ಸಲರನ್ನು ಹಲ್ದಾರ್‌ ಮತ್ತು ರಾಮೆ ಎಂದು ಗುರುತಿಸಲಾಗಿದೆ. ಇವರ ಸುಳಿವು ನೀಡಿದವರಿಗೆ ಕ್ರಮವಾಗಿ ₹8 ಲಕ್ಷ ಮತ್ತು ₹5 ಲಕ್ಷ ಬಹುಮಾನ ಘೋಷಿಸಲಾಗಿತ್ತು.

ಭದ್ರತಾ ಪಡೆಯ ಜಂಟಿ ತಂಡವು ಮಂಗಳವಾರ ಸಂಜೆ ಕಿಲಂ-ಬರಗುಂ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ವಿರೋಧಿ ಕಾರ್ಯಾಚರಣೆ ಆರಂಭಿಸಿತ್ತು. ಈ ಸಂದರ್ಭದಲ್ಲಿ ಎನ್‌ಕೌಂಟರ್‌ ನಡೆದಿದೆ ಎಂದು ಪೊಲೀಸ್‌ ಮಹಾ ನಿರ್ದೇಶಕ ಸುಂದರ್‌ರಾಜ್‌ ಪಿ. ತಿಳಿಸಿದರು.

ನಕ್ಸಲರ ಮೃತದೇಹಗಳ ಜೊತೆಗೆ ಸ್ಥಳದಲ್ಲಿದ್ದ ಎಕೆ-47 ರೈಫಲ್‌ ಮತ್ತಿತರ ಶಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries