HEALTH TIPS

ಮಾಲಿನ್ಯಮುಕ್ತ ನವಕೇರಳ-ಕರಾವಳಿ ಪ್ರವಾಸಿ ತಾಣಗಳಲ್ಲಿ ಶುಚಿತ್ವ ಅಭಿಯಾನ

ಕಾಸರಗೋಡು: ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶನದನ್ವಯ ಕಸಮುಕ್ತ ನವಕೇರಳ ಅಭಿಯಾನದ ಅಂಗವಾಗಿ ಪರಿಸರ ಸಂರಕ್ಷಣೆ ಮತ್ತು ಜವಾಬ್ದಾರಿಯುತ ಪ್ರವಾಸೋದ್ಯಮವನ್ನು ಉತ್ತೇಜಿಸಲು ಜಿಲ್ಲೆಯ ವಿವಿಧ ಕರಾವಳಿ ಪ್ರವಾಸಿ ಕೇಂದ್ರಗಳಲ್ಲಿ ಮೂರು ದಿವಸಗಳ ಕಾಲ ಎಂಟು ಪ್ರವಾಸಿ ತಾಣಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.


ಜಿಲ್ಲಾ ಪ್ರವಾಸೋದ್ಯಮ ಪ್ರಮೋಷನ್ ಕೌನ್ಸಿಲ್ ಕಾಸರಗೋಡು, ಪ್ರವಾಸೋದ್ಯಮ ಕ್ಲಬ್.ಸ್ಥಳೀಯಾಡಳಿತ ಸಂಸ್ಥೆಗಳ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಸರಗೋಡು ಜಿಲ್ಲೆಯ ಪ್ರವಾಸಿ ತಾಣಗಳನ್ನು ಸ್ವಚ್ಛಗೊಳಿಸಲು ಮತ್ತು ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು 'ಸ್ವಚ್ಛ ತಾಣ' ಅಭಿಯಾನದ ಅಂಗವಾಗಿ ಸ್ವಚ್ಛತಾ  ಚಟುವಟಿಕೆ ನಡೆಸಲಾಗಿದೆ.

ಅಯಿತ್ತಲ ಬೀಚ್‍ನಲ್ಲಿ ಕುಟುಂಬಶ್ರೀಯ ಸಿಡಿಸಿ ಸ್ವಯಂಸೇವಕರಿಂದ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಅಭಿಯಾನ ಅಂಗವಾಗಿ ಕರಾವಳಿಯಿಂದ ಹತ್ತು ಚೀಲ ಕಸ ಸಂಗ್ರಹಿಸಲಾಯಿತು. ಜತೆಗೆ ಕೈಟ್ ಬೀಚ್ ನಿರ್ವಹಣಾ ತಂಡದಿಂದ ಬೀಚ್ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಣ್ವತೀರ್ಥಬೀಚ್‍ನಲ್ಲಿ ಕುಟುಂಬಶ್ರೀಯ ಸಿಡಿಸಿ ಸ್ವಯಂ ಸೇವಕರು ಸ್ವಚ್ಛತಾಕಾರ್ಯದಲ್ಲಿ ತೊಡಗಿಸಿಕೊಂಡರು.  .

ಚೆಂಬರಿಕ ಬೀಚ್‍ನಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಕಾಸರಗೋಡು ಸರ್ಕಾರಿ ಕಾಲೇಜು ಟೂರಿಸಂ ಕ್ಲಬ್ ಸ್ವಯಂಸೇವಕರು ಮತ್ತು ಕುಟುಂಬಶ್ರೀ ಸದಸ್ಯರಿಂದ ಸಂಗ್ರಹಿಸಲಾಗಿದೆ. ಜಿಲ್ಲಾ ಪಂಚಾಯಿತಿ, ಸರ್ಕಾರಿ ಕಾಲೇಜು, ಮಂಜೇಶ್ವರ ಸರ್ಕಾರಿ ಕಾಲೇಜು ಟೂರಿಸಂ ಕ್ಲಬ್ ಸೇರಿದಂತೆ ವಿದ್ಯಾರ್ಥಿಗಳ ಭಾಗವಹಿಸುವಿಕೆ ಪರಿಸರ ಸಂರಕ್ಷಣೆ ಮತ್ತು ಜವಾಬ್ದಾರಿಯುತ ಪ್ರವಾಸೋದ್ಯಮಕ್ಕೆ ಉತ್ತಮ ಪೆÇ್ರೀತ್ಸಾಹವಾಗಿದೆ.ಸ್ವಚ್ಛತಾ ಚಟುವಟಿಕೆ ಬೀಚ್‍ಗಳಲ್ಲಿನ ಪ್ಲಾಸ್ಟಿಕ್ ತ್ಯಾಜ್ಯವನ್ನು ತೆಗೆದುಹಾಕಲು ಸಹಾಯ ಮಾಡಿತು, ಆದರೆ ಪರಿಸರವನ್ನು ರಕ್ಷಿಸುವ ಅಗತ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡಿತು. 


 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries