ಮಧೂರು : ಕುಂಬಳೆ ಸೀಮೆಯ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ವಾರ್ಷಿಕ ಬೆಡಿ ಉತ್ಸವ ಬುಧವಾರ ಅದ್ದೂರಿಯಾಗಿ ನೆರವೇರಿತು. ಶ್ರೀದೇವರ ಬಲಿ ಉತ್ಸವದ ನಂತರ ಸಂಜೆ ಮೂಲಸ್ಥಾನ ಉಳಿಯತ್ತಡ್ಕಕ್ಕೆ ಶ್ರೀದೇವರ ಘೋಷಯಾತ್ರೆ ತಾಲೀಮು ಪ್ರದರ್ಶನದೊಂದಿಗೆ ತೆರಳಿತು. ಮೂಲಸ್ಥಾನದಲ್ಲಿ ಕಟ್ಟೆಪೂಜೆ, ನಂತರ ಮಧೂರು ಬೆಡಿಕಟ್ಟೆಯಲ್ಲಿ ಕಟ್ಟೆಪೂಜೆ, ಸಾಂಪ್ರದಾಯಿಕ ಸುಡುಮದ್ದು ಪ್ರದರ್ಶನ, ಶಯನ, ಕವಾಟ ಬಂಧನ ನಡೆಯಿತು.
ಬೆಳಗ್ಗೆ ದೀಪೋತ್ಸವ, ದರ್ಶನ ಬಲಿ, ತುಲಾಭಾರ ಸೇವೆ ನೆರವೇರಿತು.
ಇಂದು ಅವಭೃತ ಸ್ನಾನ:
17ರಂದು ಬೆಳಗ್ಗೆ 7ಕ್ಕೆ ಕವಾಟೋದ್ಘಾಟನೆ, ತುಲಾಭಾರ ಸೇವೆ, ಸಂಜೆ 5ಕ್ಕೆ ತಾಯಂಬಕ, ದೀಪಾರಾಧನೆ, ರಾತ್ರಿ 8ಕ್ಕೆ ಉತ್ಸವಬಲಿ, 10ಕ್ಕೆ ವಿಶೇಷ ವಿದ್ಯುದ್ದೀಪಾಲಂಕಾರಗೊಂಡ ಶ್ರೀಕ್ಷೇತ್ರದ ಕೆರೆಯಲ್ಲಿ ಶ್ರೀದೇವರ ಅವಭೃತ ಸ್ನಾನ ನಡೆಯುವುದು. ನಂತರ ಬಟ್ಟಲುಕಾಣಿಕೆ, ರಾಜಾಂಗಣ ಪ್ರಸಾದ, ಧ್ವಜಾವರೋಹಣ ನಡೆಯುವುದು.
ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದ ವಾರ್ಷಿಕ ಬೆಡಿ ಉತ್ಸವದ ಅಂಗವಾಗಿ ಮೂಲಸ್ಥಾನ ಉಳಿಯತ್ತಡ್ಕಕ್ಕೆ ಶ್ರೀದೇವರ ಘೋಷಯಾತ್ರೆ ನಡೆಯಿತು.






