HEALTH TIPS

ತಮಿಳುನಾಡು: DMK ಸರ್ಕಾರಕ್ಕೆ ಡಬಲ್ ಆಘಾತ, ಸಚಿವ ಸ್ಥಾನಕ್ಕೆ Senthil Balaji, K Ponmudy ರಾಜಿನಾಮೆ

ಚೆನ್ನೈ: ತಮಿಳುನಾಡಿನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು ಡಿಎಂಕೆ ಸರ್ಕಾರದ ಇಬ್ಬರು ಪ್ರಮುಖ ಸಚಿವರು ತಮ್ಮ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಹೌದು.. ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ತಮಿಳುನಾಡು ಸಚಿವರಾದ ವಿ ಸೆಂಥಿಲ್ ಬಾಲಾಜಿ (V Senthil Balaji) ಮತ್ತು ಕೆ. ಪೊನ್ಮುಡಿ (K Ponmudy) ತಮ್ಮ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲ ಆರ್.ಎನ್. ರವಿ ಭಾನುವಾರ ಸಚಿವರಾದ ವಿ. ಸೆಂಥಿಲ್‌ಬಾಲಾಜಿ ಮತ್ತು ಕೆ. ಪೊನ್ಮುಡಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಸೆಂಥಿಲ್ ಬಾಲಾಜಿ ವಿರುದ್ಧ ಅಕ್ರಮ ಹಣವರ್ಗಾವಣೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಈ ಹಿಂದೆ ಇಡಿ ಅವರನ್ನು ಬಂಧಿಸಿತ್ತು. ಅಂತೆಯೇ ಇಂದು ರಾಜಿನಾಮೆ ನೀಡಿರುವ ಕೆ ಪೊನ್ಮುಡಿ ಕೂಡ ಹಿಂದೂ ಧರ್ಮದ ಕುರಿತು ಮತ್ತು ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ವಿಪಕ್ಷಗಳು ಮಾತ್ರವಲ್ಲದೇ ಸ್ವಪಕ್ಷೀಯರಿಂದಲೂ ಟೀಕೆ ಎದುರಿಸಿದ್ದರು.

ಖಾತೆ ಪುನರ್ ಹಂಚಿಕೆ

ರಾಜಭವನದ ಅಧಿಕೃತ ಪ್ರಕಟಣೆಯ ಪ್ರಕಾರ, ಸಾರಿಗೆ ಸಚಿವ ಎಸ್.ಎಸ್. ಶಿವಶಂಕರ್ ಅವರಿಗೆ ವಿದ್ಯುತ್ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದ್ದು, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್. ಮುತ್ತುಸಾಮಿ ಅವರಿಗೆ ನಿಷೇಧ ಮತ್ತು ಅಬಕಾರಿ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries