ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳು ಇಂದು (ಮಂಗಳವಾರ) ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.
ದಾಳಿ ನಡೆಸಿದ ಉಗ್ರರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಈ ಕುರಿತು ನೇರ ಪ್ರಸಾರ ಮಾಡುವುದು ಅಥವಾ 'ಮೂಲಗಳನ್ನು ಉಲ್ಲೇಖಿಸಿ' ವರದಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಶನಿವಾರ ಸೂಚನೆ ನೀಡಿದೆ.
ಈ ಹಿನ್ನೆಲೆ ಕಾರ್ಯಾಚರಣೆಯ ಬಗ್ಗೆ ಹೆಚ್ಚಿನ ವಿವರ ತಿಳಿದು ಬಂದಿಲ್ಲ.
'ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಇಂತಹ ವರದಿಗಳ ಪ್ರಸಾರ/ಪ್ರಕಟಣೆ ಬೇಡ. ಕಾರ್ಯಾಚರಣೆ ಪೂರ್ಣಗೊಳ್ಳುವುದಕ್ಕೂ ಮೊದಲೇ ವಿವರಗಳನ್ನು ಬಹಿರಂಗಪಡಿಸಿದಲ್ಲಿ ಅದು ದೇಶವಿರೋಧಿ ಶಕ್ತಿಗಳಿಗೆ ಅನುಕೂಲವಾಗಬಹುದು' ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸುದ್ದಿವಾಹಿನಿಗಳಿಗೆ ಸೂಚಿಸಿದೆ.



