HEALTH TIPS

Terror Attack: J & K ಪರಿಸ್ಥಿತಿ ಕುರಿತು ಮೋದಿಗೆ ಮಾಹಿತಿ ನೀಡಿದ ರಾಜನಾಥ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತೆಯ ಸ್ಥಿತಿಗತಿಯ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ ನಲ್ಲಿ ಏಪ್ರಿಲ್‌ 22ರಂದು ಗುಂಡಿನ ದಾಳಿ ನಡೆಸಿದ್ದ ಉಗ್ರರು, 26 ಮಂದಿಯನ್ನು ಹತ್ಯೆ ಮಾಡಿದ್ದರು.

ಇದರ ಬೆನ್ನಲ್ಲೇ, ಉಗ್ರರನ್ನು ಹತ್ತಿಕ್ಕಲು ಭಾರತ ಕಾರ್ಯಾಚರಣೆ ಆರಂಭಿಸಿದೆ.

ಜಾಗತಿಕ ಸಮುದಾಯವೂ ಈ ದಾಳಿಯನ್ನು ಖಂಡಿಸಿವೆ.

ಸಿಂಗ್‌ ಅವರು ಮೋದಿ ಅವರೊಂದಿಗೆ ಸಭೆ ನಡೆಸಿರುವ ಬಗ್ಗೆ ಈವರೆಗೆ ಅಧಿಕೃತ ಹೇಳಿಕೆಗಳು ಪ್ರಕಟವಾಗಿಲ್ಲ.

'ಮನದ ಮಾತು' ಮಾಸಿಕ ರೇಡಿಯೊ ಕಾರ್ಯಕ್ರಮವನ್ನುದ್ದೇಶಿಸಿ ಭಾನುವಾರ ಮಾತನಾಡಿದ್ದ ಪ್ರಧಾನಿ, ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ. 26 ನಾಗರಿಕರ ಹತ್ಯೆಯ ಹಿಂದಿರುವ ಭಯೋತ್ಪಾದಕರು ಮತ್ತು ಸಂಚುಕೋರರನ್ನು ಹುಡುಕಿ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಪುನರುಚ್ಚರಿಸಿದ್ದರು.

'ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಡೀ ಜಗತ್ತು 140 ಕೋಟಿ ಭಾರತೀಯರೊಂದಿಗೆ ನಿಂತಿದೆ. ದಾಳಿಯ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗಲಿದೆ ಎಂಬುದಾಗಿ ಮತ್ತೊಮ್ಮೆ ಭರವಸೆ ನೀಡುತ್ತೇನೆ' ಎಂದಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries