HEALTH TIPS

Terror Attack:ಅಟ್ಟಾರಿ-ವಾಘಾ ಭೂ ಗಡಿ ಮೂಲಕ ಹಿಂತಿರುಗುತ್ತಿರುವ ಪಾಕ್‌ ಪ್ರಜೆಗಳು

ಚಂಡೀಗಢ: ಸಾರ್ಕ್ ವೀಸಾ ಯೋಜನೆ (SVES) ಅಡಿಯಲ್ಲಿ ಭಾರತಕ್ಕೆ ಬಂದಿದ್ದ ಹಲವು ‍ಪಾಕಿಸ್ತಾನ ಪ್ರಜೆಗಳು ಅಮೃತಸರದಲ್ಲಿರುವ ಅಟ್ಟಾರಿ-ವಾಘಾ ಭೂಗಡಿ ಮೂಲಕ ಗುರುವಾರ ಹಿಂತಿರುಗುತ್ತಿದ್ದಾರೆ.

ಬೆಳಿಗ್ಗೆಯಿಂದಲೆ ಹಲವು ಕುಟುಂಬಗಳು ಅಟ್ಟಾರಿ-ವಾಘಾ ಭೂ ಮಾರ್ಗದ ಮೂಲಕ ತಮ್ಮ ದೇಶಕ್ಕೆ ಮರಳಲು ಅಮೃತಸರದ ಅಟ್ಟಾರಿ ಗಡಿಯಲ್ಲಿ ಇರುವ ಚೆಕ್‌ಪೋಸ್ಟ್‌ ತಲುಪಿವೆ.

ಪಾಕಿಸ್ತಾನಕ್ಕೆ ಪ್ರಯಾಣಿಸಲು ವೀಸಾ ಹೊಂದಿರುವ ಕೆಲವು ಭಾರತೀಯ ಪ್ರಜೆಗಳು ಇಲ್ಲಿಗೆ ತಲುಪಿದ್ದಾರೆ.

ಪಾಕಿಸ್ತಾನದ ‍ಪ್ರಜೆಗಳಿಗೆ ಸಾರ್ಕ್‌ ವೀಸಾ ವಿನಾಯಿತಿ ಯೋಜನೆಯ ಅಡಿಯಲ್ಲಿ ಭಾರತ ಪ್ರವೇಶಿಸಲು ಅವಕಾಶ ಇರುವುದಿಲ್ಲ. ಈಗಾಗಲೇ ಇಂತಹ ವೀಸಾ ಪಡೆದಿದ್ದರೆ, ಅದು ರದ್ದಾಗಿದೆ ಎಂದು ಭಾವಿಸಬೇಕು. ಈ ವೀಸಾ ಯೋಜನೆ ಅಡಿಯಲ್ಲಿ ಭಾರತಕ್ಕೆ ಬಂದವರು ಮುಂದಿನ 48 ಗಂಟೆಯಲ್ಲಿ ಭಾರತ ತೊರೆಯಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಅಟ್ಟಾರಿ ಗಡಿಯಲ್ಲಿ ಇರುವ ಚೆಕ್‌ಪೋಸ್ಟ್‌ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುತ್ತದೆ. ಈ ಮಾರ್ಗದ ಮೂಲಕ ಗಡಿ ದಾಟಿದವರು ಮೇ 1ಕ್ಕೆ ಮೊದಲು ವಾಪಸ್ಸಾಗಬೇಕು ಎಂದೂ ಸೂಚಿಸಲಾಗಿದೆ.

ನಮ್ಮ ಸಂಬಂಧಿಕರೊಬ್ಬರನ್ನು ನೋಡಲು ನಾವು ಏಪ್ರಿಲ್‌ 15ರಂದು ದೆಹಲಿಗೆ ಬಂದಿದ್ದೆವು. ನಮಗೆ 45 ದಿನಗಳ ವೀಸಾ ಇತ್ತು. ಆದರೂ ಇಂದು ಕರಾಚಿಗೆ ವಾಪಸ್‌ ಆಗುತ್ತಿದ್ದೇವೆ. ಎರಡು ದೇಶಗಳು ಸ್ನೇಹಪೂರ್ವಕವಾಗಿ ಇರಬೇಕು. ದ್ವೇಷಕ್ಕೆ ಯಾವುದೇ ಸ್ಥಾನವಿರಬಾರದು. ಯಾರೇ ದಾಳಿ ಮಾಡಿದ್ದರೂ ಅದು ತಪ್ಪು ಎಂದು ಪಾಕಿಸ್ತಾನದ ಶೇಖ್‌ ಫಜಲ್‌ ಅಹಮ್ಮದ್‌ ಹೇಳಿದ್ದಾರೆ.

90 ದಿನಗಳ ವೀಸಾ ಇತ್ತು. ಆದರೂ ಇಂದು ವಾಪಸ್‌ ಹೊರಡುತ್ತಿದ್ದೇವೆ. ಪಹಲ್ಗಾಮ್‌ ದಾಳಿ ನಡೆಯಬಾರದಿತ್ತು. ನಾನು ಅದನ್ನು ಖಂಡಿಸುತ್ತೇನೆ ಎಂದು ಪಾಕಿಸ್ತಾನದ ಮನ್ಸೂರ್‌ ಹೇಳಿದ್ದಾರೆ.

ಪಹಲ್ಗಾಮ್ ದಾಳಿ ನಡೆಯಬಾರದಿತ್ತು. ಆದರೆ ಎಲ್ಲಾ ಪಾಕ್‌ ಪ್ರಜೆಗಳು ಭಾರತವನ್ನು ತೊರೆಯುವಂತೆ ಹೇಳುವುದು ಸರಿಯಲ್ಲ ಎಂದು ಪಾಕಿಸ್ತಾನದ ಮತ್ತೊಬ್ಬ ಪ್ರಜೆ ಮುಸ್ತಫಾ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries