HEALTH TIPS

ಸರ್ಕಾರದಿಂದ ಅನ್ಯರಾಜ್ಯ ಕಾರ್ಮಿಕರಿಗೆ ಶೈಕ್ಷಣಿಕ ಜ್ಯೋತಿ ಯೋಜನೆ ಆರಂಭ- ಉಚಿತ ಅಧ್ಯಯನ ಮಾಡಲು ಅವಕಾಶ

ಕೊಚ್ಚಿ: ಅತಿಥಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣವನ್ನು ರಾಜ್ಯ ಸರ್ಕಾರ ಖಚಿತಪಡಿಸುತ್ತದೆ. ಮಕ್ಕಳಿಗೆ ಉಚಿತ ಶಿಕ್ಷಣವನ್ನು ಖಾತ್ರಿಪಡಿಸುವ ಜ್ಯೋತಿ ಯೋಜನೆಯನ್ನು ಪ್ರಾರಂಭಿಸಲಾಯಿತು.

"ಈ ಯೋಜನೆಯು ಮೂರರಿಂದ ಆರು ವರ್ಷ ವಯಸ್ಸಿನ ಅತಿಥಿ ಕಾರ್ಮಿಕರ ಎಲ್ಲಾ ಮಕ್ಕಳನ್ನು ಅಂಗನವಾಡಿಗಳಿಗೆ ಮತ್ತು ಆರು ವರ್ಷಕ್ಕಿಂತ ಮೇಲ್ಪಟ್ಟವರನ್ನು ಶಾಲೆಗಳಿಗೆ ಕಳುಹಿಸುವ ಗುರಿಯನ್ನು ಹೊಂದಿದೆ."

ಇದನ್ನು ದೇಶದ ಜವಾಬ್ದಾರಿ ಎಂದು ಪರಿಗಣಿಸಬೇಕು. "ಪ್ರತಿಯೊಂದು ಸ್ಥಳೀಯಾಡಳಿತ ಸಂಸ್ಥೆಯು ತನ್ನ ವ್ಯಾಪ್ತಿಯಲ್ಲಿರುವ ಮಕ್ಕಳ ಶೈಕ್ಷಣಿಕ ಸ್ಥಿತಿಯ ಬಗ್ಗೆ ಶಿಕ್ಷಣ ನೋಂದಣಿಯನ್ನು ಸಿದ್ಧಪಡಿಸಬೇಕು" ಎಂದು ಮುಖ್ಯಮಂತ್ರಿ ಹೇಳಿದರು.

ಮುಖ್ಯಮಂತ್ರಿಗಳು, ಆಯಾ ಸ್ಥಳಗಳಲ್ಲಿರುವ ಶಾಲೆಗಳು ಮತ್ತು ಶಿಕ್ಷಕರು ವಿಶೇಷ ಆಸಕ್ತಿ ವಹಿಸಿ, ಅತಿಥಿ ಕಾರ್ಮಿಕರ ಕುಟುಂಬಗಳನ್ನು ಭೇಟಿ ಮಾಡಿ, ಮಕ್ಕಳನ್ನು ಶಾಲೆಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಾಂಸ್ಕøತಿಕ ಮತ್ತು ಶೈಕ್ಷಣಿಕ ಸಮನ್ವಯವನ್ನು ಪ್ರಾರಂಭಿಸುವ ಭಾಗವಾಗಿ ಜ್ಯೋತಿ ಯೋಜನೆಯನ್ನು ರೂಪಿಸಲಾಗಿದೆ. ರಾಜ್ಯದಲ್ಲಿ ಸುಮಾರು 35 ಲಕ್ಷ ಅನ್ಯರಾಜ್ಯ ಕಾರ್ಮಿಕರಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries