HEALTH TIPS

ಸಮಾಜ ಸೇವಕ ಡಾ. ರವೀಂದ್ರ ಜೆಪ್ಪು ಅವರಿಗೆ ಬೇಕಲ ರಾಮನಾಯಕ ಸದ್ಭಾವನಾ ಪ್ರಶಸ್ತಿ ಪ್ರದಾನ

ಕಾಸರಗೋಡು: ಅಗ್ರಗಣ್ಯ ಸಾಹಿತಿ ದಿ. ಬೇಕಲ ರಾಮನಾಯಕ ಸದ್ಭಾವನಾ ಪ್ರಶಸ್ತಿ-2025'ಮಂಗಳೂರಿನ ಸಮಾಜಸೇವಕ, ಸಂಘಟಕ ಡಾ. ರವೀಂದ್ರ ಜೆಪ್ಪು ಅವರಿಗೆ ಪ್ರದಾನ ಮಾಡಲಾಯಿತು.  ಸಾಹಿತಿ ಬೇಕಲ ರಾಮನಾಯಕ ಸಂಸ್ಮರಣೆ ಅನ್ವಯ ಕಾಸರಗೋಡು ಕನ್ನಡ ಭವನ ಈ ಪ್ರಶಸ್ತಿಯನ್ನು ಕೊಡಮಾಡಿದ್ದು,  ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ,ದ ಬಯಲು ರಂಗ ಮಂಟಪದಲ್ಲಿ ನಡೆದ ಸಾಹಿತಿ ದಿ. ಬೇಕಲ ರಾಮನಾಯಕ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ. ರವೀಂದ್ರ ಜೆಪ್ಪು ಅವರಿಗೆ ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಪ್ರಶಸ್ತಿ ಪ್ರದಾನ ಮಾಡಿದರು.

ಕಾಸರಗೋಡು ಜಿಲ್ಲಾ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಅಧ್ಯಕ್ಷರಾದ ಕಮಲಾಕ್ಷ ಕಲ್ಲುಗದ್ದೆ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಮುಂದಾಳು ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ, ಕೊಡಗು ಕನ್ನಡ ಭವನ ಅಧ್ಯಕ್ಷ ಬೋಲಿಜಿರ ಬಿ. ಅಯ್ಯಪ್ಪ, ಕೊಡಗು ಕನ್ನಡ ಚು. ಸಾ. ಪ. ಅಧ್ಯಕ್ಷೆ ರುಬೀನ ಎಂ. ಎ., ಸಾಹಿತಿ ಡಾ. ಕೊಲಚಪ್ಪೆ ಗೋವಿಂದ ಭಟ್, ಕಾಸರಗೋಡು ಜಿಲ್ಲಾ ಕನ್ನಡ ಚು. ಸಾ. ಪ. ಅಧ್ಯಕ್ಷ ವಿರಾಜ್ ಅಡೂರ್, ಕನ್ನಡ ಭವನ ಗೌರವ ಅಧ್ಯಕ್ಷ ಪತ್ರಕರ್ತ ಪ್ರದೀಪ್ ಬೇಕಲ್, ದೇವರಾಜ್ ಸೂರಂಬೈಲ್, ಸಂಘಟನಾ ಕಾರ್ಯದರ್ಶಿ ರಾಜೇಶ್ ಕೋಟೆಕಣಿ, ಕನ್ನಡ ಭವನ ಕಾರ್ಯದರ್ಶಿ ವಸಂತ್ ಕೆರೆಮನೆ ಉಪಸ್ಥಿತರಿದ್ದರು. ಉಪಾಧ್ಯಕ್ಷ ಪ್ರಕಾಶ್ ಚಂದ್ರ ಸ್ವಾಗತಿಸಿದರು.  ಕನ್ನಡ ಭವನ ನಿರ್ದೇಶಕರಾದ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಗಿರೀಶ್ ಪಿ ಎಂ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries