HEALTH TIPS

ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಹರಿಯಾಣದ ಕಾಂಗ್ರೆಸ್‌ ಮಾಜಿ ಶಾಸಕ ಸೆರೆ

ನವದೆಹಲಿ: ವಂಚನೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ, ಹರಿಯಾಣದ ಕಾಂಗ್ರೆಸ್‌ ಮಾಜಿ ಶಾಸಕ ಧರ್ಮಸಿಂಗ್‌ ಛೋಕರ್‌ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಭಾನುವಾರ ಬಂಧಿಸಿದೆ.

ಛೋಕರ್‌ ಅವರನ್ನು ದೆಹಲಿಯ ಹೋಟೆಲ್‌ವೊಂದರಲ್ಲಿ ಬಂಧಿಸಿದ್ದು, ಗುರುಗ್ರಾಮದ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ.

ಮನೆ ಖರೀದಿದಾರರಿಂದ ₹500 ಕೋಟಿ ಪಡೆದು ವಂಚಿಸಿದ ಆರೋಪ ಸಂಬಂಧ, ಧರ್ಮಸಿಂಗ್ ಅವರ ಇಬ್ಬರು ಮಕ್ಕಳಾದ ವಿಕಾಸ್‌ ಛೋಕರ್‌ ಹಾಗೂ ಸಿಕಂದರ್‌ ಛೋಕರ್‌ ವಿರುದ್ಧ ಇ.ಡಿ ಪ್ರಕರಣ ದಾಖಲಿಸಿಕೊಂಡಿತ್ತು. ಸಿಕಂದರ್‌ ಅವರನ್ನು ಇ.ಡಿ ಕಳೆದ ವರ್ಷ ಬಂಧಿಸಿತ್ತು. ಆ ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ವಿಕಾಸ್‌ ತಲೆಮರೆಸಿಕೊಂಡಿದ್ದಾರೆ.

ಪಾಣೀಪತ್‌ ಜಿಲ್ಲೆಯ ಸಮಾಲಖ ಕ್ಷೇತ್ರದ ಮಾಜಿ ಶಾಸಕರಾಗಿರುವ ಧರ್ಮಸಿಂಗ್ ಅವರು, ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries