HEALTH TIPS

ನಕ್ಸಲ್‌ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲು ಬಡಿದು ಸಿಆರ್‌ಪಿಎಫ್ ಅಧಿಕಾರಿ ಸಾವು

 ರಾಂಚಿ: ಜಾರ್ಖಂಡ್‌ನಲ್ಲಿ ನಡೆದ ನಕ್ಸಲ್‌ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಸಿಡಿಲು ಬಡಿದು ಸಿಆರ್‌ಪಿಎಫ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಕೆರಿಬುರು ಗ್ರಾಮದಲ್ಲಿ ಗುರುವಾರ ರಾತ್ರಿ 10.30 ರ ಸುಮಾರಿಗೆ ಈ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

26ನೇ ಬೆಟಾಲಿಯನ್‌ಗೆ ಸೇರಿದ ಎರಡನೇ ಕಮಾಂಡ್ ಶ್ರೇಣಿಯ ಅಧಿಕಾರಿ ಎಂ.ಪ್ರಭೋ ಸಿಂಗ್ ಮೃತ ಅಧಿಕಾರಿ. ಇವರು ಮಣಿಪುರದ ಪಶ್ಚಿಮ ಇಂಫಾಲ್ ಜಿಲ್ಲೆಯವರಾಗಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಅರಣ್ಯ ಪ್ರದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಅಖPಈ) ಅಧಿಕಾರಿಗಳು ಗಸ್ತು ತಿರುಗುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries