HEALTH TIPS

ಭಾರತ-ಪಾಕ್‌ ಕದನ ವಿರಾಮಕ್ಕಾಗಿ ರಚನಾತ್ಮಕ ಪಾತ್ರ: ಚೀನಾ

ಬೀಜಿಂಗ್: ಭಾರತ-ಪಾಕಿಸ್ತಾನ ನಡುವಣ 'ಶಾಶ್ವತ ಕದನ ವಿರಾಮ' ಸ್ಥಾಪನೆಯಲ್ಲಿ ದೇಶವು ರಚನಾತ್ಮಕ ಪಾತ್ರ ವಹಿಸಲಿದೆ ಎಂದು ಚೀನಾ ಸೋಮವಾರ ಹೇಳಿದೆ.

ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಮಹಮ್ಮದ್‌ ಇಶಾಕ್‌ ಡಾರ್‌ ಅವರು ಚೀನಾದ ಉನ್ನತ ರಾಜತಾಂತ್ರಿಕ ಅಧಿಕಾರಿ ವಾಂಗ್‌ ಯಿ ಅವರೊಂದಿಗೆ ಮಾತುಕತೆಗಾಗಿ ಬೀಜಿಂಗ್‌ಗೆ ಸೋಮವಾರ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಚೀನಾ ಈ ಹೇಳಿಕೆ ನೀಡಿದೆ.

ಭಾರತವು 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆ ಮೂಲಕ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ನಂತರ, ಪಾಕಿಸ್ತಾನದ ಉನ್ನತ ಅಧಿಕಾರಿಯೊಬ್ಬರು ಇದೇ ಮೊದಲ ಬಾರಿಗೆ ಚೀನಾಗೆ ಬೇಟಿ ನೀಡಿದ್ದಾರೆ.

ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿರಿಸುವ ಭಾರತದ ನಿರ್ಧಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಿತ್ರ ರಾಷ್ಟ್ರದೊಂದಿಗೆ ಡಾರ್‌ ಅವರು ಮಾತುಕತೆ ನಡೆಸುವ ನಿರೀಕ್ಷೆ ಇದೆ. ‍

'ಚೀನಾ, ಪಾಕಿಸ್ತಾನ ಎರಡೂ ಸರ್ವಋತು ಸಹಕಾರ ಕಾರ್ಯತಂತ್ರದ ಪಾಲುದಾರ ರಾಷ್ಟ್ರಗಳು. ಡಾರ್‌ ಅವರ ಈ ಭೇಟಿಯು ಉಭಯ ದೇಶಗಳ ಸಂಬಂಧ ವೃದ್ಧಿಗೆ ಪಾಕಿಸ್ತಾನ ಸರ್ಕಾರ ನೀಡಿರುವ ಮಹತ್ವವನ್ನು ಬಿಂಬಿಸುತ್ತದೆ' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಮಾವೊ ನಿಂಗ್‌ ಸುದ್ದಿಗಾರರಿಗೆ ತಿಳಿಸಿದರು.

ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗಾಗಿ ಉಭಯ ದೇಶಗಳ ಜತೆ ಮಾತುಕತೆಗೆ ಚೀನಾ ಸಿದ್ಧವಿದೆ ಮತ್ತು 'ಶಾಶ್ವತ ಕದನ ವಿರಾಮ' ಒಪ್ಪಂದ ಮೂಡುವಂತೆ ಮಾಡುವಲ್ಲಿ ಚೀನಾ ರಚನಾತ್ಮಕ ಪಾತ್ರ ವಹಿಸಲಿದೆ ಎಂದು ಅವರು ಹೇಳಿದರು.

ಭಾರತ ಮತ್ತು ಪಾಕಿಸ್ತಾನ ಚೀನಾದ ಪ್ರಮುಖ ನೆರೆಯ ದೇಶಗಳು. ಈ ಎರಡೂ ದೇಶಗಳೊಂದಿಗೆ ಸಂಬಂಧ ವೃದ್ಧಿಗೆ ಚೀನಾ ಆದ್ಯತೆ ನೀಡುತ್ತದೆ ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries