HEALTH TIPS

ಸೇನೆಯ ಅಸಾಧಾರಣ ಶಕ್ತಿಯ ಸಂಕೇತ 'ಆಪರೇಷನ್‌ ಸಿಂಧೂರ'

ನವದೆಹಲಿ: ಆಪರೇಷನ್ ಸಿಂಧೂರವು ಪ್ರಧಾನಿ ನರೇಂದ್ರ ಮೋದಿಯವರ ದೃಢವಾದ ರಾಜಕೀಯ ಇಚ್ಛಾಶಕ್ತಿ, ವಿವಿಧ ಏಜೆನ್ಸಿಗಳಿಂದ ನಿಖರವಾದ ಗುಪ್ತಚರ ಮಾಹಿತಿ ಸಂಗ್ರಹಣೆ ಮತ್ತು ದೇಶದ ಮೂರು ಸಶಸ್ತ್ರ ಪಡೆಗಳ ಸಾಟಿಯಿಲ್ಲದ ದಾಳಿಯ ಸಾಮರ್ಥ್ಯದ ಪ್ರತಿಬಿಂಬವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬಣ್ಣಿಸಿದ್ದಾರೆ.

ವಿವಿಧ ಏಜೆನ್ಸಿಗಳ ನಡುವೆ ಗುಪ್ತಚರ ಮಾಹಿತಿಯನ್ನು ಹಂಚಿಕೊಳ್ಳಲು ದೆಹಲಿಯಲ್ಲಿ ಉನ್ನತೀಕರಿಸಿದ ಬಹು ಏಜೆನ್ಸಿ ಕೇಂದ್ರವನ್ನು ಉದ್ಘಾಟಿಸಿದ ನಂತರ ಅವರು ಮಾತನಾಡಿದರು.

26/11ರ ಮುಂಬೈ ಭಯೋತ್ಪಾದಕ ದಾಳಿಯ ನಂತರ ಗುಪ್ತಚರ ಇಲಾಖೆಯು ವಿವಿಧ ಏಜೆನ್ಸಿಗಳಿಂದ ಸಮಯೋಚಿತವಾದ ಮಾಹಿತಿಗಳನ್ನು ಹಂಚಿಕೊಳ್ಳುವ ಉದ್ದೇಶದಿಂದ ಬಹು ಏಜೆನ್ಸಿ ಕೇಂದ್ರವನ್ನು ಸ್ಥಾಪಿಸಿದೆ.

'ಪಹಲ್ಗಾಮ್‌ ದಾಳಿಗೆ ಪ್ರತೀಕಾರ ತೆಗೆದುಕೊಳ್ಳಲು ಪ್ರಧಾನಿ ಮೋದಿಯವರು ತೋರಿದ ದೃಢ ನಿಶ್ಚಯ, ಗುಪ್ತಚರ ಇಲಾಖೆ ವಿವಿಧ ಸಂಸ್ಥೆಗಳಿಂದ ಸಂಗ್ರಹಿಸಿದ ಖಚಿತ ಮಾಹಿತಿ ಆಧರಿಸಿ, 'ಸಿಂಧೂರ' ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ನಮ್ಮ ಸಶಸ್ತ್ರಪಡೆಯ ಯೋಧರು ತೋರಿದ ಪರಾಕ್ರಮ, ಧೈರ್ಯ, ಸಾಹಸವು ಮೆಚ್ಚುವಂತಹದ್ದು' ಎಂದು ಗೃಹ ಸಚಿವರು ಶ್ಲಾಘಿಸಿದರು.

ಆಪರೇಷನ್ ಸಿಂಧೂರವು ಭಯೋತ್ಪಾದನೆ ವಿರುದ್ಧದ ಭಾರತದ ಹೊಸ ನೀತಿ ಮತ್ತು ನ್ಯಾಯಕ್ಕಾಗಿ ದೇಶದ ಅಚಲ ಪ್ರತಿಜ್ಞೆಯಾಗಿದೆ ಎಂದು ಮೋದಿ ಹೇಳಿದ್ದರು.

ಭಾರತವು ಅಣ್ವಸ್ತ್ರದ ಬೆದರಿಕೆಗೆ ಬಲಿಯಾಗುವುದಿಲ್ಲ ಎಂದು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದ ಮೋದಿ, 'ಭಯೋತ್ಪಾದನೆ ಮತ್ತು ವ್ಯಾಪಾರ, ಭಯೋತ್ಪಾದನೆ ಮತ್ತು ಮಾತುಕತೆಗಳು ಒಟ್ಟಿಗೆ ಸಾಗಲು ಸಾಧ್ಯವಿಲ್ಲ' ಎಂಬ ಸ್ಪಷ್ಟ ಸಂದೇಶವನ್ನು ಜಗತ್ತಿಗೆ ನೀಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries