HEALTH TIPS

ಮುಗು ಶ್ರೀ ಸುಬ್ರಾಯ ದೇವ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುಜ್ಞಾ ಕಲಶ ಹಾಗೂ ಶ್ರೀ ದೇವರ ಬಾಲಾಲಯ ಪ್ರತಿಷ್ಠೆ ಸಂಪನ್ನ

ಕುಂಬಳೆ: ಸುಮಾರು ಎರಡು ಸಾವಿರ ವರ್ಷಗಳ ಪುರಾತನ ಐತಿಹ್ಯವುಳ್ಳ ಮುಗು,ಶೇಣಿ ಎರಡು ಗ್ರಾಮಗಳ  ಕಾರಣೀಕ ಪ್ರಸಿದ್ಧ ಕ್ಷೇತ್ರ

ಮುಗು ಶ್ರೀ ಸುಬ್ರಾಯ ದೇವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಕ್ಷೇತ್ರದಲ್ಲಿ ಅನುಜ್ಞಾ ಕಲಶ ಹಾಗೂ ಶ್ರೀ ದೇವರ ಬಾಲಾಲಯ ಪ್ರತಿಷ್ಠೆ ಕ್ಷೇತ್ರ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ಭಾನುವಾರ ಜರಗಿತು.


ಇದರ ಅಂಗವಾಗಿ ಶನಿವಾರ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹವಾಚನ ಸ್ಥಳ ಶುದ್ಧಿ, ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ ಜರಗಿತು. ಭಾನುವಾರ  ಪ್ರಾತಃಕಾಲ ಗಣಪತಿ ಹೋಮ, ಅನುಜ್ಞಾಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ ಬಳಿಕ ಸುಬ್ರಾಯ ದೇವರ ಹಾಗೂ ಪರಿವಾರ ದೇವರ ಚೈತನ್ಯ ಉದ್ವಾಸನೆ ಹಾಗೂ ಬಾಲಾಲಯ ಪ್ರತಿಷ್ಠೆ, ಮಹಾಪೂಜೆ ಜರಗಿತು. ಈ ಸಂದರ್ಭ ಧಾರ್ಮಿಕ ಮುಂದಾಳು ಮಹಾಬಲೇಶ್ವರ ಭಟ್ ಎಡಕ್ಕಾನ, ಉದ್ಯಮಿ ದಾನಿ ವಸಂತ ಪೈ ಬದಿಯಡ್ಕ, ದೇಲಂಪಾಡಿ ಮಹಾಲಿಂಗೇಶ್ವರ ಕ್ಷೇತ್ರ ಕಾರ್ಯಧ್ಯಕ್ಷ ಡಿ. ದಾಮೋದರ, ಪದ್ಮನಾಭ ಆಚಾರ್ಯ ಬಾಡೂರು, ವಾಸ್ತು ಶಿಲ್ಪಿ ರಂಜಿತ್ ಉದುಮ, ಕಾಷ್ಠಶಿಲ್ಪಿ ವಿಷ್ಣು ಆಚಾರ್ಯ, ನಿರ್ಮಾಣ ಶಿಲ್ಪಿ ಶೇಸಪ್ಪ ಕುಲಾಲ್

ಹಾಗೂ ಮುಗು, ಶೇಣಿ ಗ್ರಾಮದ ಭಕ್ತ ಜನರು, ಕ್ಷೇತ್ರ ಆಡಳಿತ, ಸೇವಾ ಸಮಿತಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರ ಜೀರ್ಣೋದ್ಧಾರದ ನಿಧಿಕುಂಭ ಕಾಣಿಕೆ ಸಮರ್ಪಣೆ ನಡೆಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries