HEALTH TIPS

ಕದನ ವಿರಾಮ ಉಲ್ಲಂಘಿಸಿದರೆ ತಕ್ಕ ಉತ್ತರ: ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ

ನವದೆಹಲಿ: ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸಿದರೆ ಪ್ರತಿದಾಳಿ ನಡೆಸುವಂತೆ ಭಾರತ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಸೇನಾ ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ.

ಮೇ 10-11ರ ರಾತ್ರಿ ನಡೆದ ಕದನ ವಿರಾಮ ಮತ್ತು ವಾಯುಪ್ರದೇಶ ಉಲ್ಲಂಘನೆಯ ಪರಿಣಾಮವಾಗಿ ಸೇನಾ ಮುಖ್ಯಸ್ಥರು ಪಶ್ಚಿಮ ಗಡಿಗಳ ಸೇನಾ ಕಮಾಂಡರ್‌ಗಳೊಂದಿಗೆ ಭದ್ರತಾ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಸೇನೆ ಮಾಹಿತಿ ನೀಡಿದೆ.

ಪಾಕಿಸ್ತಾನ ಬೆಂಬಲಿತ ಉಗ್ರರನ್ನು ಸದೆಬಡಿಯಲು ಭಾರತ ನಡೆಸಿದ 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆಯ ಬಳಿಕ ಉಭಯ ರಾಷ್ಟ್ರಗಳ ನಡುವೆ ಸೃಷ್ಟಿಯಾಗಿದ್ದ ಯುದ್ಧದ ಸ್ವರೂಪದ ಸಂಘರ್ಷ ಕೊನೆಗೊಳಿಸಲು ಶನಿವಾರ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಪಾಕ್‌ ಮತ್ತೆ ದಾಳಿ ಆರಂಭಿಸಿತ್ತು.

ಎರಡೂ ದೇಶಗಳ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಪರಸ್ಪರ ಮಾತುಕತೆ ನಡೆಸಿ, ಶನಿವಾರ ಸಂಜೆಯಿಂದಲೇ ಸಂಘರ್ಷ ಕೊನೆಗಾಣಿಸಲು ಒಪ್ಪಿಗೆ ಸೂಚಿಸಿದ್ದರು. ಆದರೆ ಶನಿವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರ, ಪಂಜಾಬ್‌, ರಾಜಸ್ಥಾನ ಮತ್ತು ಗುಜರಾತ್‌ ಗಡಿಪ್ರದೇಶಗಳಲ್ಲಿ ಡ್ರೋನ್‌ ದಾಳಿಗೆ ಪಾಕ್‌ ಯತ್ನ ನಡೆಸಿದ್ದು, ಭಾರತ ತಕ್ಕ ಪ್ರತ್ಯುತ್ತರ ನೀಡಿತ್ತು.

ನಿರಂತರವಾಗಿ ದಾಳಿ ನಡೆಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸಶಸ್ತ್ರ ಪಡೆಯು ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪಾಕಿಸ್ತಾನದ ಎಂಟು ಮಿಲಿಟರಿ ನೆಲೆಗಳ ಮೇಲೆ ನಿಖರ ದಾಳಿ ನಡೆಸಿ ಭಾರಿ ಹಾನಿ ಉಂಟು ಮಾಡಿದೆ. ಅದರ ಬೆನ್ನಲ್ಲೇ, ಪಾಕಿಸ್ತಾನದ ಡಿಜಿಎಂಒ, ಭಾರತದ ಡಿಜಿಎಂಒ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries